Advertisement
ಯಕ್ಷಗಾನ : ಮಾತು-ಮಸೆತ

ಅಂತಃಕರಣ ವೃತ್ತಿಯು ಅಧೋಮುಖಿಯಾಗಿದ್ದುದು ಊಧ್ರ್ವಮುಖಿಯಾಗಬೇಕು

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

(ತನಗೆ ಉದ್ಯೋಗ ನೀಡಬೇಕೆಂದು ಶಾರದೆ ಬಿನ್ನವಿಸಿಕೊಂಡಾಗ ಬ್ರಹ್ಮನು ವಿದ್ಯಾಧಿಕಾರದ ಪಟ್ಟ ನೀಡಲು ಮುಂದಾಗುತ್ತಾನೆ)

“… ವಿದ್ಯಾಧಿದೇವತೆಯ ಪಟ್ಟ ಅದು ಬುದ್ಧಿಯ ಮೇಲೆ. ವ್ಯವಸಾಯಾತ್ಮಕವಾದ ಬುದ್ಧಿಯ ಸ್ಥಾನದಲ್ಲಿ ಶಾರದೆ ಪ್ರಕಾಶಿಸುತ್ತಾಳೆ. ಯೋಗಶಾಸ್ತ್ರದ ಪ್ರಕಾರ ‘ಸಹಸ್ರಾರ’ ಎಂಬ ಸ್ಥಾನವೊಂದು ನೆತ್ತಿಯಲ್ಲಿದೆ. ಅಲ್ಲಿ ಅವಳು ವಾಸ ಮಾಡುತ್ತಾಳೆ. ಬ್ರಹ್ಮನ ಸ್ಥಾನವೂ ಕಮಲವೇ. ಶಾರದೆಯ ಸ್ಥಾನವೂ ಕಮಲವೇ. ಆದರೆ ಅದು ನಾಭೀಕಮಲ. ನಿನ್ನ (ಶಾರದೆ) ಪೀಠ ಅದಲ್ಲ. ಸಹಸ್ರಾರ ಚಕ್ರದ ಕಮಲ. ಶಾರದೆಯಾದ ನಿನಗೆ ಇದನ್ನು ಅರ್ಥೈಸಲು ಕಷ್ಟವಾಗದು.

ಈ ದೇಹೇಂದ್ರಿಯಗಳಿಗಿಂತ ಮನಸ್ಸು ಶ್ರೇಷ್ಠವಾದುದು. ಮನಸ್ಸಿಗಿಂತಲೂ ಬುದ್ಧಿ ಉತ್ಕೃಷ್ಟವಾದುದು. ಈ ದೇಹೇಂದ್ರಿಯಗಳೆಲ್ಲಾ ಮನಸ್ಸಿನಲ್ಲಿ ನೆಲೆಸಬೇಕು. ಈ ಕರ್ಮೇಂದ್ರಿಯ, ಜ್ಞಾನೇಂದ್ರಿಯಗಳು ಶಬ್ದ, ಸ್ಪರ್ಶ, ರೂಪ, ರಸ, ಗಂಧಾದಿ ವಿಷಯಗಳನ್ನು ಸವಿಯುತ್ತವೆ. ಆಮೇಲೆ ದಾಹಗೊಳ್ಳುತ್ತದೆ. ಈ ದಾಹಗೊಳ್ಳುತ್ತಿರುವ ವೃತ್ತಿ ಮನಸ್ಸಿನಲ್ಲಿ ಲೀನವಾಗಬೇಕು. ಈ ಹತ್ತು ಇಂದ್ರಿಯಗಳು ಹನ್ನೊಂದನೆಯ ಇಂದ್ರಿಯಾಧ್ಯಕ್ಷನಲ್ಲಿ ಕೇಂದ್ರೀಕೃತವಾದರೆ, ಈ ಶುದ್ಧವಾದಂತಹ ಯಾವತ್ತೂ ಏಕಾದಶೀ ಸ್ಥಾನದಿಂದ, ಈ ಎಲ್ಲಾ ಶಬ್ದ, ಸ್ಪರ್ಶ, ರೂಪ, ರಸ, ಗಂಧಾದಿಗಳನ್ನು ಅರಗಿಸಿಕೊಂಡು, ಈ ಅಂತಃಕರಣ ವೃತ್ತಿಯು ಅಧೋಮುಖಿಯಾಗಿದ್ದುದು ಊಧ್ರ್ವಮುಖಿಯಾಗಬೇಕು. ಆವಾಗ ಅದಕ್ಕೆ ‘ಚಿತ್ತ’ ಅಂತ ಹೆಸರು.
ಈ ಚಿತ್ತವೃತ್ತಿ ಎಲ್ಲಾ ವಾಸನೆಗಳನ್ನು ಕೂಡಿಸಿಕೊಂಡು ಬುದ್ಧಿಯಲ್ಲಿ ರಮಿಸಬೇಕು. ಆಗ ಅದು ಶುದ್ಧ ಅದ್ವೈತವೇ ಆಗಿಬಿಟ್ಟರೆ ಕೊನೆಗೆ ಉಳಿದದ್ದು ‘ಜ್ಞಾನ’ ಮಾತ್ರ. ಆದ್ದರಿಂದ ಇಂತಹ ‘ಜ್ಞಾನ’ ಕೊನೆಯಲ್ಲಿ ಸಹಸ್ರಾರದಲ್ಲಿದ್ದ ಶಾರದೆಯಲ್ಲಿ ಮುಳುಗಿಹೋಗುವಾಗ ದೃಕ್ ಇಲ್ಲ; ದೃಶ್ಯ ಇಲ್ಲ. ದರ್ಶನವೂ ಇಲ್ಲ….”

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

2 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago