ಯಕ್ಷಗಾನ : ಮಾತು-ಮಸೆತ

ಅಂತಃಕರಣ ವೃತ್ತಿಯು ಅಧೋಮುಖಿಯಾಗಿದ್ದುದು ಊಧ್ರ್ವಮುಖಿಯಾಗಬೇಕು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

Advertisement
Advertisement

(ತನಗೆ ಉದ್ಯೋಗ ನೀಡಬೇಕೆಂದು ಶಾರದೆ ಬಿನ್ನವಿಸಿಕೊಂಡಾಗ ಬ್ರಹ್ಮನು ವಿದ್ಯಾಧಿಕಾರದ ಪಟ್ಟ ನೀಡಲು ಮುಂದಾಗುತ್ತಾನೆ)

“… ವಿದ್ಯಾಧಿದೇವತೆಯ ಪಟ್ಟ ಅದು ಬುದ್ಧಿಯ ಮೇಲೆ. ವ್ಯವಸಾಯಾತ್ಮಕವಾದ ಬುದ್ಧಿಯ ಸ್ಥಾನದಲ್ಲಿ ಶಾರದೆ ಪ್ರಕಾಶಿಸುತ್ತಾಳೆ. ಯೋಗಶಾಸ್ತ್ರದ ಪ್ರಕಾರ ‘ಸಹಸ್ರಾರ’ ಎಂಬ ಸ್ಥಾನವೊಂದು ನೆತ್ತಿಯಲ್ಲಿದೆ. ಅಲ್ಲಿ ಅವಳು ವಾಸ ಮಾಡುತ್ತಾಳೆ. ಬ್ರಹ್ಮನ ಸ್ಥಾನವೂ ಕಮಲವೇ. ಶಾರದೆಯ ಸ್ಥಾನವೂ ಕಮಲವೇ. ಆದರೆ ಅದು ನಾಭೀಕಮಲ. ನಿನ್ನ (ಶಾರದೆ) ಪೀಠ ಅದಲ್ಲ. ಸಹಸ್ರಾರ ಚಕ್ರದ ಕಮಲ. ಶಾರದೆಯಾದ ನಿನಗೆ ಇದನ್ನು ಅರ್ಥೈಸಲು ಕಷ್ಟವಾಗದು.

ಈ ದೇಹೇಂದ್ರಿಯಗಳಿಗಿಂತ ಮನಸ್ಸು ಶ್ರೇಷ್ಠವಾದುದು. ಮನಸ್ಸಿಗಿಂತಲೂ ಬುದ್ಧಿ ಉತ್ಕೃಷ್ಟವಾದುದು. ಈ ದೇಹೇಂದ್ರಿಯಗಳೆಲ್ಲಾ ಮನಸ್ಸಿನಲ್ಲಿ ನೆಲೆಸಬೇಕು. ಈ ಕರ್ಮೇಂದ್ರಿಯ, ಜ್ಞಾನೇಂದ್ರಿಯಗಳು ಶಬ್ದ, ಸ್ಪರ್ಶ, ರೂಪ, ರಸ, ಗಂಧಾದಿ ವಿಷಯಗಳನ್ನು ಸವಿಯುತ್ತವೆ. ಆಮೇಲೆ ದಾಹಗೊಳ್ಳುತ್ತದೆ. ಈ ದಾಹಗೊಳ್ಳುತ್ತಿರುವ ವೃತ್ತಿ ಮನಸ್ಸಿನಲ್ಲಿ ಲೀನವಾಗಬೇಕು. ಈ ಹತ್ತು ಇಂದ್ರಿಯಗಳು ಹನ್ನೊಂದನೆಯ ಇಂದ್ರಿಯಾಧ್ಯಕ್ಷನಲ್ಲಿ ಕೇಂದ್ರೀಕೃತವಾದರೆ, ಈ ಶುದ್ಧವಾದಂತಹ ಯಾವತ್ತೂ ಏಕಾದಶೀ ಸ್ಥಾನದಿಂದ, ಈ ಎಲ್ಲಾ ಶಬ್ದ, ಸ್ಪರ್ಶ, ರೂಪ, ರಸ, ಗಂಧಾದಿಗಳನ್ನು ಅರಗಿಸಿಕೊಂಡು, ಈ ಅಂತಃಕರಣ ವೃತ್ತಿಯು ಅಧೋಮುಖಿಯಾಗಿದ್ದುದು ಊಧ್ರ್ವಮುಖಿಯಾಗಬೇಕು. ಆವಾಗ ಅದಕ್ಕೆ ‘ಚಿತ್ತ’ ಅಂತ ಹೆಸರು.
ಈ ಚಿತ್ತವೃತ್ತಿ ಎಲ್ಲಾ ವಾಸನೆಗಳನ್ನು ಕೂಡಿಸಿಕೊಂಡು ಬುದ್ಧಿಯಲ್ಲಿ ರಮಿಸಬೇಕು. ಆಗ ಅದು ಶುದ್ಧ ಅದ್ವೈತವೇ ಆಗಿಬಿಟ್ಟರೆ ಕೊನೆಗೆ ಉಳಿದದ್ದು ‘ಜ್ಞಾನ’ ಮಾತ್ರ. ಆದ್ದರಿಂದ ಇಂತಹ ‘ಜ್ಞಾನ’ ಕೊನೆಯಲ್ಲಿ ಸಹಸ್ರಾರದಲ್ಲಿದ್ದ ಶಾರದೆಯಲ್ಲಿ ಮುಳುಗಿಹೋಗುವಾಗ ದೃಕ್ ಇಲ್ಲ; ದೃಶ್ಯ ಇಲ್ಲ. ದರ್ಶನವೂ ಇಲ್ಲ….”

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

7 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

18 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

23 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago