Advertisement
ಕಾರ್ಯಕ್ರಮಗಳು

ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೊಡಗ್‍ರ ಸಿಪಾಯಿ’ ಚಿತ್ರ ಆಯ್ಕೆ

Share

ಮಡಿಕೇರಿ : ಇತ್ತೀಚಿಗೆ ಬಿಡುಗಡೆಯಾದ ‘ಕೊಡಗ್‍ರ ಸಿಪಾಯಿ’ ಕೊಡವ ಚಲನಚಿತ್ರ ಕೊಲ್ಕತ್ತಾದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆಯಾಗಿದೆ ಎಂದು ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಕೊಡವ ಸಮಾಜದಲ್ಲಿ “ಕೊಡಗ್‍ರ ಸಿಪಾಯಿ” ಚಲನಚಿತ್ರದ 51ನೇ ಪ್ರದರ್ಶನದ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾಹಿತಿ ನೀಡಿದರು.
ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವಗಲೇ ಕೊಡವ ಚಲನಚಿತ್ರವೊಂದು ಪ್ರದರ್ಶನಕ್ಕೆ ಅವಕಾಶ ಪಡೆದಿರುವುದು ಹೆಮ್ಮೆಯ ವಿಚಾರ ಎಂದರು.

ನ.8 ರಿಂದ 15ರ ವರೆಗೆ ಕೊಲ್ಕತ್ತಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ‘ಕೊಡಗ್‍ರ ಸಿಪಾಯಿ’ ಪ್ರದರ್ಶನಗೊಳ್ಳಲಿದೆ. ತಾವು ನಿರ್ಮಿಸಿದ ‘ಬಾಕೆಮನೆ’ ಕೊಡವ ಚಲನ ಚಿತ್ರ ಕೂಡ ಈ ಹಿಂದೆ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡಿತ್ತು. ಇದೀಗ ಅಪರೂಪದ ಉಪ ಭಾಷೆಗಳ ವಿಭಾಗದ ಚಲನಚಿತ್ರಗಳಲ್ಲಿ ‘ಕೊಡಗ್‍ರ ಸಿಪಾಯಿ’ ಅವಕಾಶ ಪಡೆದಿರುವುದು ಅತ್ಯಂತ ಹರ್ಷದಾಯಕ ಎಂದು ಪ್ರಕಾಶ್ ಕಾರ್ಯಪ್ಪ ತಿಳಿಸಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮೈಸೂರು ಕೊಡವ ಸಮಾಜದ ಅಧ್ಯಕ್ಷ ಕೇಕಡ ಬೆಳ್ಯಪ್ಪ ಅವರು, ಕೊಡಗ್‍ರ ಸಿಪಾಯಿ ಚಲನಚಿತ್ರ ನಿರ್ಮಾಣದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಕಲ್ಯಾಟಂಡ ಬಿ. ಗಣಪತಿ ಮಾತನಾಡಿ, ಸಿನಿಮಾ ರಂಗದ ಮೂಲಕವು ಕೊಡವ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬೆಳವಣಿಗೆಯಾಗುತ್ತಿರುವುದು ಶ್ಲಾಘನೀಯವೆಂದರು.

ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗ್‍ರ ಸಿಪಾಯಿ ಚಿತ್ರದ ನಾಯಕ ನಟ ಅಥ್ಲಿಟ್ ಅರ್ಜುನ್ ದೇವಯ್ಯ ಅವರುಗಳು ಮಾತನಾಡಿದರು. ಲೌಲಿ ಪ್ರಾರ್ಥಿಸಿ, ರವಿ ಬೆಳ್ಯಪ್ಪ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ಅಜ್ಜಮಾಡ ರಮೇಶ್ ಕುಟ್ಟಪ್ಪ, ತೇಲಪಂಡ ಕವನ್ ಕಾರ್ಯಪ್ಪ, ಸಾಹಿತ್ಯ ಕ್ಷೇತ್ರದ ಪ್ರೋತ್ಸಾಹಕ್ಕಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಕೊಡಗ್‍ರ ಸಿಪಾಯಿ ಸಿನಿಮಾಕ್ಕೆ ಕಥೆ ಒದಗಿಸಿದ ಉಳುವಂಗಡ ಕಾವೇರಿ ಉದಯ, ಚಿತ್ರದ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ, ನಟರುಗಳಾದ ಅರ್ಜುನ್ ದೇವಯ್ಯ, ತೇಜಸ್ವಿನಿ ಶರ್ಮ ಹಾಗೂ ವಾಂಚಿರ ವಿಠಲ್ ನಾಣಯ್ಯ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭ ನಿರ್ಮಾಪಕ ಹಾಗೂ ನಿರ್ದೇಶಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಅರ್ಜುನ್ ದೇವಯ್ಯ ಅವರಿಗೆ ಪೀಚೆಕತ್ತಿ ನೀಡಿ ಸನ್ಮಾನಿಸಿದರು. ಮೈಸೂರು ಕೊಡವ ಸಮಾಜದ ಮಾಜಿ ಅಧ್ಯಕ್ಷ ಡಾ.ಆದೆಂಗಡ ಕುಟ್ಟಪ್ಪ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago