Advertisement
ಸುದ್ದಿಗಳು

ಅಂತರಾಷ್ಟ್ರೀಯ ಯೋಗ ದಿನಾಚರಣೆ….

Share
ಯೋಗೇನ ಚಿತ್ತಸ್ಯ ಪದೇನ ವಾಚಾಂ
ಮಲಂ ಶರೀರಸ್ಯ ಚವೈದ್ಯಕೇನಾ
ಯೋಪಾ ಕರೋತ್ಂ ಪ್ರವರಂ ಮುನೀನಾಂ
ಪತಂಜಲಿಂ ಪ್ರಾಂಜಲಿ ರಾನತೋಸ್ಮಿ.
ನಮ್ಮ ದೇಶದ ಹೆಮ್ಮೆ ಯೋಗ. ಪ್ರಾಚೀನ ಪರಂಪರೆಯ ಕೊಡುಗೆ. ಆಯುರ್ವೇದ ವೈದ್ಯ ಪದ್ಧತಿಯೊಂದಿಗೆ  ಯೋಗದ ಕೊಡುಗೆಯೂ ಮಹತ್ವದ್ದು.  ಪತಂಜಲಿ ಮಹರ್ಷಿಯೋಗ ಪಿತಾಮಹ. ಯೋಗದ ಸೂತ್ರಗಳನ್ನು ಕ್ರೋಡೀಕರಿಸಿದವರು.ಹತ್ತು ಹದಿನೈದು ವರುಷಗಳಿಂದ ಯೋಗದ ಸ್ವರೂಪ ಬದಲಾಗುತ್ತಿದೆ. ಯೋಗಕ್ಕೆ ಅಂತರಾಷ್ಟ್ರೀಯ ಮನ್ನಣೆ ದೊರೆಯುವಲ್ಲಿ  ಪ್ರಮುಖ ಪಾತ್ರ ವಹಿಸಿದವರು ನಮ್ಮ ಪ್ರಧಾನ ಮಂತ್ರಿಯವ    ರಾದ ನರೇಂದ್ರ ಮೋದಿಯವರು.
ಕೆಲವು  ವರ್ಷಗಳ ಹಿಂದೆ ಜಗತ್ತಿನ ದೃಷ್ಟಿ ಯಲ್ಲಿ ಭಾರತ ಹೀಗಿರಲಿಲ್ಲ. , ಭಾರತವೆಂದರೆ ಹಾವಾಡಿಗರ ದೇಶ, ಅಜ್ಞಾನ ಮೌಢ್ಯಗಳ ತವರೂರು, ಗಲೀಜು ದೇಶ, ಅನಕ್ಷರಸ್ಥರ ದೇಶ, ಅಲ್ಲಿನ ಜನರು  ಹೊರಗಿನಿಂದ ಬಂದವರನ್ನು ಸುಲಿಗೆ ಮಾಡುತ್ತಾರೆ ಎಂಬ ವಿಷಯಗಳೇ‌ ಪ್ರಮುಖ ವಾಹಿನಿಗಳಲ್ಲಿ ಹರಿದಾಡುತ್ತಿತ್ತು. ಆದರೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಯವರು ತಮ್ಮ ಭಾರತದ ಚಿತ್ರಣವನ್ನು ಸಂಪೂರ್ಣ ವಾಗಿ ಬದಲಿಸುವ ನಿಟ್ಟಿನಲ್ಲಿ ಕಾರ್ಯತತ್ಪರರಾದರು.  ಅವುಗಳಲ್ಲಿ ಪ್ರಮುಖವಾಗಿ ಗುರುತಿಸಿಕೊಂಡದ್ದು  “ಯೋಗ”. ಆರೋಗ್ಯದ  ದೃಷ್ಟಿಯಿಂದ ಯೋಗದ ಪ್ರಾಮುಖ್ಯತೆ ಯನ್ನು ಜಗತ್ತು ಗುರುತಿಸುವಂತೆ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕರಡು ಪ್ರಸ್ತಾವನೆಯನ್ನು 2014 ಡಿಸೆಂಬರ್ ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಖಾಯಂ ಪ್ರತನಿಧಿಯಾಗಿರುವ ಅಶೋಕ್ ಕುಮಾರ್ ಮಂಡಿಸಿದ್ದರು. ವಿಶ್ವಸಂಸ್ಥೆಗೆ ಇದು ಐತಿಹಾಸಿಕ ಕ್ಷಣವಾಗಿದ್ದು, ಅದರ ಸದಸ್ಯ ರಾಷ್ಟ್ರಗಳು ಅಭೂತಪೂರ್ವ ಬೆಂಬಲ ಸೂಚಿಸಿದ್ದರು. ವಿಶ್ವ ಸಂಸ್ಥೆಯ 193 ರಾಷ್ಟ್ರಗಳ ಪೈಕಿ 177 ದೇಶಗಳು ಅನುಮೋದನೆಯನ್ನು ಸೂಚಿಸಿದುವು.   ಪ್ರಪಂಚದೆಲ್ಲೆಡೆ ಈ ದಿನದಂದು ಯೋಗದಿನವಾಗಿ ಆಚರಿಸಲಾಗುತ್ತದೆ.
ಜೂನ್ 21  ವಿಶೇಷವಾದ ಆಯನ ಸಂಕ್ರಾಂತಿಯ ದಿನ. ಇಂದು ದೀರ್ಘ ಕಾಲದ ಹಗಲಿರುತ್ತದೆ.  ಉತ್ತರ ಗೋಲಾರ್ಧದಲ್ಲಿ ದೀರ್ಘ ವಾಗಿಯು, ದಕ್ಷಿಣ ಗೋಳಾರ್ಧದಲ್ಲಿ ಕಡಿಮೆ ಹಗಲು ಇರುವ ದಿನವಾಗಿದೆ. ಯೋಗದ ದೃಷ್ಟಿ ಯಲ್ಲಿ ಈ ದಿನ ಮಹತ್ವ ಪೂರ್ಣ ವಾದ ದಿನವಾಗಿದೆ.  ದಕ್ಷಿಣ ಯಾನಕ್ಕೆ ಪರಿವರ್ತನೆ  ಎಂದು  ಗುರುತಿಸುವ  ದಿನವಾಗಿದೆ. ಆಧ್ಯಾತ್ಮಿಕ ಅಭ್ಯಾಸ ಗಳಿಗೆ ದಕ್ಷಿಣ ಯಾನ ನೈಸರ್ಗಿಕ ಬೆಂಬಲವೀಯುವುದರಿಂದ ಈ ದಿನವನ್ನು ಸೂಕ್ತ ವೆಂದು ಆಯ್ದುಕೊಳ್ಳಲಾಗಿದೆ.  ದೈವ ಬಲವೂ , ಮನೋಬಲವು ಒಂದಾದರೆ  ಯಶಸ್ಸು ಖಂಡಿತ. ಯೋಗ ವೆಂದರೆ ಬರಿಯ ವ್ಯಾಯಾಮ ವಲ್ಲ. ಶಿಸ್ತು ಬದ್ಧ ಉಸಿರಾಟದೊಂದಿಗೆ ಕ್ರಮಬದ್ಧ ವಾಗಿ ಮಾಡುವ ಯೋಗವೇ ನಿಜವಾದ ಯೋಗ. ಗುರುಮುಖೇನವೇ ಯೋಗ ಕಲಿಯಬೇಕೆಂಬ ನಿಯಮವಿದೆ. ಶಿಸ್ತು, ಸಂಯಮವನ್ನು  ಯೋಗ ಕಲಿಸುತ್ತದೆ. ಮನಸಿನ ನಿಯಂತ್ರಣವನ್ನು ಹೇಗೆ ಮಾಡಬೇಕೆಂದು ಯೋಗ ತಿಳಿಸುತ್ತದೆ. ಮನೋಬಲವನ್ನು ಹೆಚ್ಚಿಸುತ್ತಾ  ಶರೀರವನ್ನು ಗಟ್ಟಿಗೊಳಿಸುವ ಶಕ್ತಿ ಯೋಗಕ್ಕಿದೆ. ನಾವು ಏನೇ ಮಾಡಿದರು ನಂಬಿಕೆಯಿದ್ದಾಗ ಮಾತ್ರ.  ಯಶಸ್ಸಿನ ನಿರೀಕ್ಷೆ ಮಾಡಬಹುದು. ಈ ಮಾತು ಯೋಗದ ವಿಷಯದಲ್ಲಿ ಅಕ್ಷರಶಃ  ಸತ್ಯ. ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಪಲಿತಾಂಶ ಖಂಡಿತ. ಯಾವುದನ್ನು ಇಷ್ಟಪಟ್ಟು ಮಾಡುತ್ತೇವೋ ಅದು ಎಷ್ಟು ಕ್ಲಿಷ್ಟಕರವಾದರೂ ನಮಗೊಲಿಯುತ್ತದೆ.  ಅದಕ್ಕಾಗಿ ಸಮಯ ಮೀಸಲಿಟ್ಟು ಮಾಡಬೇಕಲ್ಲಾ ಎಂಬ ಭಾವನೆಯಲ್ಲಿ ಮಾಡಿ ಪ್ರಯೋಜನವಿಲ್ಲ, ಯಾವುದೇ ಒತ್ತಡದಲ್ಲೂ ಮಾಡಬಾರದು( ಒತ್ತಡ ನಿವಾರಣೆಗೇ ಯೋಗ ಮಾಡುವುದು. ಅದರಿಂದಲೇ  ಒತ್ತಡವಾಗಬಾರದು) ಶಾಂತ ಮನಸ್ಥಿತಿಯಿಂದ  ಗಡಿಬಿಡಿಯಿಲ್ಲದೆ ಆರಾಮವಾಗಿ ಮಾಡಬೇಕು.
ನನ್ನ ಮಟ್ಟಿಗೆ ಯೋಗವೆಂದರೆ  personal ಸಮಯ.  ದಿನದ ಕೆಲವು ಸಮಯವನ್ನಾದರೂ  ನನಗಾಗಿ , ನನ್ನ ಆರೋಗ್ಯಕ್ಕಾಗಿ ಮೀಸಲಿಡುವ ಅಗತ್ಯ ಅರಿವಾಗಿದೆ. ಕಳೆದುಕೊಳ್ಳಲು ಮನಸೇ ಬಾರದು.  ಒಂದಷ್ಟು ಸಮಯ ನಮ್ಮ ಉಸಿರಾಟದ ಜೊತೆಯಲ್ಲಿ,  ದೇಹಕ್ಕಾಗುವ ವ್ಯಾಯಾಮ  ಕೊಡುವ ಲಾಭ ನಮ್ಮ ಊಹೆಗೂ ನಿಲುಕದ್ದು. ಆರೋಗ್ಯವಂತ ಶರೀರಕ್ಕೆ ಸಂತುಲಿತ  ಆಹಾರ ಎಷ್ಟು ಮುಖ್ಯ ವೋ  ದೇಹದ  ‌‌ಸಮತೋಲನ  ಕಾಪಾಡುವಲ್ಲಿ ಯೋಗವೂ ಅಷ್ಟೇ ಪಾತ್ರವಹಿಸುತ್ತದೆ.  ಯೋಗದ ಬಗ್ಗೆ ಗೌರವವಿರಲಿ.  ಯೋಗವನ್ನು ಪ್ರೀತಿಸಿ.
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

2 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

2 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

10 hours ago

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

17 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

1 day ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

1 day ago