ಧರ್ಮಸ್ಥಳ: ಶುದ್ಧವಾದ ಗಾಳಿ ಮತ್ತು ನೀರು ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.
ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ.ಜಿಲ್ಲಾಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗುಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು. ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಅವರು ಹೇಳಿದರು.
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ.ಅಧ್ಯಕ್ಷ ಕೇಶವ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ,ಜೋಸೆಫ್ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಉಮೇಶ್ ಕೆ. ಸ್ವಾಗತಿಸಿದರು. ಪ್ರಫುಲ್ಲಾ ಧನ್ಯವಾದವಿತ್ತರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…