Advertisement
ಸುದ್ದಿಗಳು

ಅಂತರ್ಜಲ ಜನಜಾಗೃತಿ ಶಿಬಿರ: ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ

Share

ಧರ್ಮಸ್ಥಳ: ಶುದ್ಧವಾದ ಗಾಳಿ ಮತ್ತು ನೀರು ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ.ಜಿಲ್ಲಾಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗುಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು. ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಅವರು ಹೇಳಿದರು.

ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ.ಅಧ್ಯಕ್ಷ ಕೇಶವ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ,ಜೋಸೆಫ್‍ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಉಮೇಶ್ ಕೆ. ಸ್ವಾಗತಿಸಿದರು. ಪ್ರಫುಲ್ಲಾ ಧನ್ಯವಾದವಿತ್ತರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

4 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

16 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

17 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago