Advertisement
ಸುದ್ದಿಗಳು

ಅಂತರ್ಜಲ ಜನಜಾಗೃತಿ ಶಿಬಿರ: ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ

Share

ಧರ್ಮಸ್ಥಳ: ಶುದ್ಧವಾದ ಗಾಳಿ ಮತ್ತು ನೀರು ದೇವರು ನಮಗೆ ಕೊಟ್ಟ ಸೌಭಾಗ್ಯವಾಗಿದೆ. ನೀರನ್ನು ಹಿತ-ಮಿತವಾಗಿ ಬಳಸಿ, ಪೋಲು ಮಾಡಬೇಡಿ ಎಂದು ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಿ.ಬಾಲಕೃಷ್ಣ ಪೂಜಾರಿ ಹೇಳಿದರು.

ಅವರು ಮಂಗಳವಾರ ಧರ್ಮಸ್ಥಳದಲ್ಲಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ದ.ಕ.ಜಿಲ್ಲಾಅಂತರ್ಜಲ ಕಛೇರಿಯ ಆಶ್ರಯದಲ್ಲಿ ಆಯೋಜಿಸಿದ ಸಾರ್ವಜನಿಕ ಅಂತರ್ಜಲ ಜನಜಾಗೃತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೊಳವೆ ಬಾವಿಗಳಿಂದಾಗಿ ಭೂಮಿಯ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂಗುಗುಂಡಿಗಳ ಮೂಲಕ ನೀರನ್ನು ಭೂಮಿಗೆ ಇಂಗಿಸುವ ಮೂಲಕ ನೀರಿನ ಸದ್ಬಳಕೆ ಮಾಡಬೇಕು. ಹನಿ ನೀರಾವರಿಯಿಂದಲೂ ಕಡಿಮೆ ನೀರು ಬಳಸಿ ಹೆಚ್ಚು ಕೃಷಿ ಮಾಡಬಹುದು. ಕಳೆದ 15 ವರ್ಷಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಮಳೆ ಬರುವ ರೀತಿಯಲ್ಲಿ ವ್ಯತ್ಯಾಸವಾಗಿದೆ ಎಂದು ಅವರು ಹೇಳಿದರು.

ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಿವ್ಯಜ್ಯೋತಿ, ಎ.ಪಿ.ಎಂ.ಸಿ.ಅಧ್ಯಕ್ಷ ಕೇಶವ ಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ, ಯೋಜನಾಧಿಕಾರಿ ಜಯಕರ ಶೆಟ್ಟಿ, ಉಡುಪಿಯ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಭೂ ವಿಜ್ಞಾನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊರಗಪ್ಪ ನಾಯ್ಕ್ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ರತ್ನಶ್ರೀ,ಜೋಸೆಫ್‍ಜಿ.ಎಮ್. ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಭಿವೃದ್ಧಿಅಧಿಕಾರಿ ಉಮೇಶ್ ಕೆ. ಸ್ವಾಗತಿಸಿದರು. ಪ್ರಫುಲ್ಲಾ ಧನ್ಯವಾದವಿತ್ತರು. ಚಂದ್ರಿಕಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

22 minutes ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

25 minutes ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

18 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago