ಅನುಕ್ರಮ

ಅಂತರ್ಜಲ ಮಟ್ಟದ ತೀವ್ರ ಕುಸಿತದಿಂದ ಬತ್ತಿದ ಜಲ ಮೂಲಗಳು : ಅಂತರ್ಜಲ ಸಂವರ್ಧನೆಗೆ ಮುಂದಾಗಬೇಕಿದೆ ಸಂಘ ಸಂಸ್ಥೆಗಳು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಎಲ್ಲೆಡೆ ಬೋರವೆಲ್ ಲಾರಿಗಳು ಮತ್ತೆ ಎಡೆಬಿಡದೆ ಸದ್ದು ಮಾಡುತ್ತಿವೆ. ಮುಂಗಾರು ಮಳೆ ವಿಳಂಬವಾಗಿರುವುದರಿಂದ ಈಗಾಗಲೇ ಕೆರೆ, ಬಾವಿ, ಹೊಳೆ, ನದಿಗಳು ಬತ್ತಿದ್ದು ಕೊಳವೆ ಬಾವಿಗಳಲ್ಲಿ ಕೂಡ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು ಜನರಲ್ಲಿ ಮುಖ್ಯವಾಗಿ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ. ಜನರು ಹೊಸ ಕೊಳವೆ ಬಾವಿಗಳನ್ನು ಕೊರೆಸಸಿ , ಇರುವ ಕೊಳವೆ ಬಾವಿಗಳ ಆಳವನ್ನು ಹೆಚ್ಚಿಸಿ , ಹೆಚ್ಚುವರಿ ಪೈಪ್ ಗಳನ್ನು ಅಳವಡಿಸಿ ಪಂಪನ್ನು ಇನ್ನಷ್ಟು ಆಳಕ್ಕೆ ಅಳವಡಿಸಿ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುತ್ತಿದ್ದಾರೆಯೇ ವಿನಹ ನೀರಿನ ಸಮಸ್ಯೆಗೆ ಮೂಲ  ಕಾರಣ ಏನು ಎಂಬುದರ ಬಗ್ಗೆಯಾಗಲಿ ಅಂತರ್ಜಲ ವೃದ್ಧಿಗಾಗಿ ತಾನು ಏನು  ಮಾಡಬಹುದು ಎಂಬುದರ ಬಗ್ಗೆಯಾಗಲಿ ಯೋಚಿಸುವ ಗೋಜಿಗೆ ಹೋಗದಿರುವುದು  ಅತ್ಯಂತ ಆತಂಕಕಾರಿ ಬೆಳವಣಿಗೆ.
ನಮ್ಮೆಲ್ಲರ  ಈ ಮಟ್ಟದ ಪ್ರಜ್ಞಾಶೂನ್ಯತೆ, ಪ್ರಾಕೃತಿಕ ಸಂಪನ್ಮೂಲಗಳನ್ನು ಮನಸೋಇಚ್ಛೆ ಬಳಕೆ ಮಾಡುವ ದುರಾಸೆಯೇ ಅಂತರ್ಜಲ ಮಟ್ಟ ಅಪಾಯಕಾರಿ ಕುಸಿತ ಕಾಣಲು ಕಾರಣ ಎಂದರೆ ತಪ್ಪಾಗಲಾರದು.
ಕೊಳವೆ ಬಾವಿಗಳು ನೀರಿನ ಶಾಶ್ವತ ಮೂಲಗಳಲ್ಲ :
2 ದಶಕಗಳ ಹಿಂದೆ ಹೆಚ್ಚಾಗಿ ಬೇಸಾಯವನ್ನೇ ನೆಚ್ಚಿಕೊಂಡಿದ್ದ ಜಿಲ್ಲೆಯ ಜನತೆ ಕೊಳವೆ ಬಾವಿಯ ಸೌಲಭ್ಯದ ಪರಿಚಯವಾದ ನಂತರ ಕಾಡು ಕಡಿದು ಗುಡ್ಡ ಬಗೆದು ಅಡಿಕೆ ಕೃಷಿ ಮಾಡಲಾರಂಭಿಸಿದ್ದು ಇದೀಗ ಸಂಪೂರ್ಣ ಅಡಿಕೆ ಕೃಷಿ ಮೇಲೆ ಅವಲಂಬಿತವಾಗಿದೆ. ಅತಿಯಾದ ನೀರು ಬೇಡುವ  ಅಡಿಕೆ ಕೃಷಿಯನ್ನು ವ್ಯಾಪಕವಾಗಿ ವಿಸ್ತರಿಸಿದ ಕೃಷಿಕರು ಇದೀಗ ಕೊಳವೆ ಬಾವಿಗಳು ಕೈ ಕೊಡುತ್ತಲೇ ತಲೆ ಮೇಲೆ ಕೈ ಹೊತ್ತು ಚಿಂತಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಳವೆ ಬಾವಿಗಳು ನೀರಿನ ಶಾಶ್ವತ ಮೂಲಗಳಲ್ಲ ಎಂಬ ಸತ್ಯ ನಿಧಾನವಾಗಿ ಜನರಿಗೆ ಅರಿವಾಗಲಾರಂಭಿಸಿದೆ.
ನೀರಿಲ್ಲವೆಂದು ಹೋಮ ಹವನದ ಜೊತೆಗೆ ನೀರಿಂಗಿಸಿ :
ಮಳೆ ನೀರು ಇಂಗಿದರೆ ಮಾತ್ರ ಅಂತರ್ಜಲ ವೃದ್ಧಿ ಸಾಧ್ಯ . ನೀರಿಗಾಗಿ ಪ್ರಾರ್ಥನೆ, ಪೂಜೆ ನಡೆಯಲಿ. ಅದರ ಜೊತೆಗೆ  ಜಲ ಸಂರಕ್ಷಣೆ, ಅಂತರ್ಜಲ ಸಂವರ್ಧನೆ, ನೀರಿಂಗಿಸುವಿಕೆ, ಕೊಳವೆ ಬಾವಿಗೆ ಜಲಮರುಪೂರಣ ಮೊದಲಾದ ಯೋಜನೆಗಳನ್ನು ತಮ್ಮ  ಜಮೀನಿನಲ್ಲಿ ಅನುಷ್ಠಾನಗೊಳಿಸಿ ಯಶಸ್ಸು ಪಡೆಯಬೇಕಿದೆ.
ಅಂತರ್ಜಲವನ್ನು ವೃದ್ಧಿಸಿಕೊಂಡು ತಮ್ಮ ಭೂಮಿ ಹಸನಾಗಿಸಿದ ಸಾಧಕರ ಬಗ್ಗೆ ತಿಳಿದು, ಮಾರ್ಗದರ್ಶನ ಪಡೆದು ನಮ್ಮ ಜಮೀನಿನಲ್ಲಿಯೂ ಅನುಷ್ಠಾನಗೊಳಿಸಿದರೆ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜಲಾನಯನ ಇಲಾಖೆಯವರು ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳಿಗೆ ಮಳೆಗಾಲ ಕಳೆದ ನಂತರ ಹಲಗೆಗಳನ್ನು ಅಳವಡಿಸಲು ಜನರು  ಉತ್ಸಾಹ ತೋರಬೇಕು.
ಅಂತರ್ಜಲ ಸಂವರ್ಧನೆಗೆ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಸಂಘ ಸಂಸ್ಥೆಗಳು :
ಜನತೆಯಲ್ಲಿ ಆತಂಕ ಸೃಷ್ಟಿಸಿರುವ ಅಂತರ್ಜಲ ಮಟ್ಟದ ಕುಸಿತದ ಬಗ್ಗೆ, ಪರಿಹಾರ ಮಾರ್ಗೋಪಾಯಗಳ ಬಗ್ಗೆ ವ್ಯಾಪಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘ ಸಂಸ್ಥೆಗಳು  ಜನರನ್ನು ಜಾಗೃತಗೊಳಿಸಬೇಕಿದೆ. ಕೊಳವೆ ಬಾವಿಗಳಿಗೆ ಜಲ ಮರುಪೂರಣ, ಇಂಗುಗುಂಡಿಗಳ ನಿರ್ಮಾಣ, ಮನೆಯ ಮೇಲ್ಚಾವಣಿಗೆ ಬೀಳುವ ಮಳೆ ನೀರಿನ ಕೊಯ್ಲು ಮೊದಲಾದ ಯೋಜನೆಗಳನ್ನು ಗ್ರಾಮ ಗ್ರಾಮಗಳಲ್ಲಿ ಕೈಗೆತ್ತಿಕೊಂಡು ಆಂದೋಲನದ ಮಾದರಿಯಲ್ಲಿ ಅಂತರ್ಜಲ ಸಂವರ್ಧನೆಗೆ ಜನರನ್ನು ಪ್ರೇರೇಪಿಸಿದಾಗ ಮಾತ್ರ ನೀರಿನ ಸಮಸ್ಯೆಗೆ ಪರಿಹಾರ ದೊರಕಲಿದೆ.
* ಗುರುಪ್ರಿಯಾ ನಾಯಕ್
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

2 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

2 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

11 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

11 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

11 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

11 hours ago