Advertisement
ಅನುಕ್ರಮ

ಅಂತರ್ಜಲ ಮಟ್ಟದ ತೀವ್ರ ಕುಸಿತದಿಂದ ಬತ್ತಿದ ಜಲ ಮೂಲಗಳು : ಅಂತರ್ಜಲ ಸಂವರ್ಧನೆಗೆ ಮುಂದಾಗಬೇಕಿದೆ ಸಂಘ ಸಂಸ್ಥೆಗಳು

Share
ಎಲ್ಲೆಡೆ ಬೋರವೆಲ್ ಲಾರಿಗಳು ಮತ್ತೆ ಎಡೆಬಿಡದೆ ಸದ್ದು ಮಾಡುತ್ತಿವೆ. ಮುಂಗಾರು ಮಳೆ ವಿಳಂಬವಾಗಿರುವುದರಿಂದ ಈಗಾಗಲೇ ಕೆರೆ, ಬಾವಿ, ಹೊಳೆ, ನದಿಗಳು ಬತ್ತಿದ್ದು ಕೊಳವೆ ಬಾವಿಗಳಲ್ಲಿ ಕೂಡ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು ಜನರಲ್ಲಿ ಮುಖ್ಯವಾಗಿ ಕೃಷಿಕರಲ್ಲಿ ಆತಂಕ ಮನೆ ಮಾಡಿದೆ. ಜನರು ಹೊಸ ಕೊಳವೆ ಬಾವಿಗಳನ್ನು ಕೊರೆಸಸಿ , ಇರುವ ಕೊಳವೆ ಬಾವಿಗಳ ಆಳವನ್ನು ಹೆಚ್ಚಿಸಿ , ಹೆಚ್ಚುವರಿ ಪೈಪ್ ಗಳನ್ನು ಅಳವಡಿಸಿ ಪಂಪನ್ನು ಇನ್ನಷ್ಟು ಆಳಕ್ಕೆ ಅಳವಡಿಸಿ ತಾತ್ಕಾಲಿಕ ಪರಿಹಾರ ಕಂಡುಕೊಳ್ಳುತ್ತಿದ್ದಾರೆಯೇ ವಿನಹ ನೀರಿನ ಸಮಸ್ಯೆಗೆ ಮೂಲ  ಕಾರಣ ಏನು ಎಂಬುದರ ಬಗ್ಗೆಯಾಗಲಿ ಅಂತರ್ಜಲ ವೃದ್ಧಿಗಾಗಿ ತಾನು ಏನು  ಮಾಡಬಹುದು ಎಂಬುದರ ಬಗ್ಗೆಯಾಗಲಿ ಯೋಚಿಸುವ ಗೋಜಿಗೆ ಹೋಗದಿರುವುದು  ಅತ್ಯಂತ ಆತಂಕಕಾರಿ ಬೆಳವಣಿಗೆ.
ನಮ್ಮೆಲ್ಲರ  ಈ ಮಟ್ಟದ ಪ್ರಜ್ಞಾಶೂನ್ಯತೆ, ಪ್ರಾಕೃತಿಕ ಸಂಪನ್ಮೂಲಗಳನ್ನು ಮನಸೋಇಚ್ಛೆ ಬಳಕೆ ಮಾಡುವ ದುರಾಸೆಯೇ ಅಂತರ್ಜಲ ಮಟ್ಟ ಅಪಾಯಕಾರಿ ಕುಸಿತ ಕಾಣಲು ಕಾರಣ ಎಂದರೆ ತಪ್ಪಾಗಲಾರದು.
ಕೊಳವೆ ಬಾವಿಗಳು ನೀರಿನ ಶಾಶ್ವತ ಮೂಲಗಳಲ್ಲ :
2 ದಶಕಗಳ ಹಿಂದೆ ಹೆಚ್ಚಾಗಿ ಬೇಸಾಯವನ್ನೇ ನೆಚ್ಚಿಕೊಂಡಿದ್ದ ಜಿಲ್ಲೆಯ ಜನತೆ ಕೊಳವೆ ಬಾವಿಯ ಸೌಲಭ್ಯದ ಪರಿಚಯವಾದ ನಂತರ ಕಾಡು ಕಡಿದು ಗುಡ್ಡ ಬಗೆದು ಅಡಿಕೆ ಕೃಷಿ ಮಾಡಲಾರಂಭಿಸಿದ್ದು ಇದೀಗ ಸಂಪೂರ್ಣ ಅಡಿಕೆ ಕೃಷಿ ಮೇಲೆ ಅವಲಂಬಿತವಾಗಿದೆ. ಅತಿಯಾದ ನೀರು ಬೇಡುವ  ಅಡಿಕೆ ಕೃಷಿಯನ್ನು ವ್ಯಾಪಕವಾಗಿ ವಿಸ್ತರಿಸಿದ ಕೃಷಿಕರು ಇದೀಗ ಕೊಳವೆ ಬಾವಿಗಳು ಕೈ ಕೊಡುತ್ತಲೇ ತಲೆ ಮೇಲೆ ಕೈ ಹೊತ್ತು ಚಿಂತಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಳವೆ ಬಾವಿಗಳು ನೀರಿನ ಶಾಶ್ವತ ಮೂಲಗಳಲ್ಲ ಎಂಬ ಸತ್ಯ ನಿಧಾನವಾಗಿ ಜನರಿಗೆ ಅರಿವಾಗಲಾರಂಭಿಸಿದೆ.
ನೀರಿಲ್ಲವೆಂದು ಹೋಮ ಹವನದ ಜೊತೆಗೆ ನೀರಿಂಗಿಸಿ :
ಮಳೆ ನೀರು ಇಂಗಿದರೆ ಮಾತ್ರ ಅಂತರ್ಜಲ ವೃದ್ಧಿ ಸಾಧ್ಯ . ನೀರಿಗಾಗಿ ಪ್ರಾರ್ಥನೆ, ಪೂಜೆ ನಡೆಯಲಿ. ಅದರ ಜೊತೆಗೆ  ಜಲ ಸಂರಕ್ಷಣೆ, ಅಂತರ್ಜಲ ಸಂವರ್ಧನೆ, ನೀರಿಂಗಿಸುವಿಕೆ, ಕೊಳವೆ ಬಾವಿಗೆ ಜಲಮರುಪೂರಣ ಮೊದಲಾದ ಯೋಜನೆಗಳನ್ನು ತಮ್ಮ  ಜಮೀನಿನಲ್ಲಿ ಅನುಷ್ಠಾನಗೊಳಿಸಿ ಯಶಸ್ಸು ಪಡೆಯಬೇಕಿದೆ.
ಅಂತರ್ಜಲವನ್ನು ವೃದ್ಧಿಸಿಕೊಂಡು ತಮ್ಮ ಭೂಮಿ ಹಸನಾಗಿಸಿದ ಸಾಧಕರ ಬಗ್ಗೆ ತಿಳಿದು, ಮಾರ್ಗದರ್ಶನ ಪಡೆದು ನಮ್ಮ ಜಮೀನಿನಲ್ಲಿಯೂ ಅನುಷ್ಠಾನಗೊಳಿಸಿದರೆ ನೀರಿನ ಸಮಸ್ಯೆ ಬಗೆಹರಿಸಿಕೊಳ್ಳಬಹುದು. ಜಲಾನಯನ ಇಲಾಖೆಯವರು ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳಿಗೆ ಮಳೆಗಾಲ ಕಳೆದ ನಂತರ ಹಲಗೆಗಳನ್ನು ಅಳವಡಿಸಲು ಜನರು  ಉತ್ಸಾಹ ತೋರಬೇಕು.
ಅಂತರ್ಜಲ ಸಂವರ್ಧನೆಗೆ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಸಂಘ ಸಂಸ್ಥೆಗಳು :
ಜನತೆಯಲ್ಲಿ ಆತಂಕ ಸೃಷ್ಟಿಸಿರುವ ಅಂತರ್ಜಲ ಮಟ್ಟದ ಕುಸಿತದ ಬಗ್ಗೆ, ಪರಿಹಾರ ಮಾರ್ಗೋಪಾಯಗಳ ಬಗ್ಗೆ ವ್ಯಾಪಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಘ ಸಂಸ್ಥೆಗಳು  ಜನರನ್ನು ಜಾಗೃತಗೊಳಿಸಬೇಕಿದೆ. ಕೊಳವೆ ಬಾವಿಗಳಿಗೆ ಜಲ ಮರುಪೂರಣ, ಇಂಗುಗುಂಡಿಗಳ ನಿರ್ಮಾಣ, ಮನೆಯ ಮೇಲ್ಚಾವಣಿಗೆ ಬೀಳುವ ಮಳೆ ನೀರಿನ ಕೊಯ್ಲು ಮೊದಲಾದ ಯೋಜನೆಗಳನ್ನು ಗ್ರಾಮ ಗ್ರಾಮಗಳಲ್ಲಿ ಕೈಗೆತ್ತಿಕೊಂಡು ಆಂದೋಲನದ ಮಾದರಿಯಲ್ಲಿ ಅಂತರ್ಜಲ ಸಂವರ್ಧನೆಗೆ ಜನರನ್ನು ಪ್ರೇರೇಪಿಸಿದಾಗ ಮಾತ್ರ ನೀರಿನ ಸಮಸ್ಯೆಗೆ ಪರಿಹಾರ ದೊರಕಲಿದೆ.
* ಗುರುಪ್ರಿಯಾ ನಾಯಕ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

54 minutes ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 hour ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

8 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

13 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago