ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…