ಸುಳ್ಯ: ಸಾಧನೆ ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…