ನವದೆಹಲಿ: ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನವಾದ ರಫೇಲ್ ಹೊಂದುವ ಭಾರತೀಯ ವಾಯುಪಡೆಯ ಕನಸು ಕೊನೆಗೂ ನನಸಾಗಿದೆ. 5 ಯುದ್ಧ ವಿಮಾನಗಳು ಬುಧವಾರ ಹರ್ಯಾಣದ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ಆರ್ಕೆಎಸ್ ಭದೌರಿಯ ಸೇರಿದಂತೆ ವಾಯುಸೇನೆಯ ಹಿರಿಯ ಅಧಿಕಾರಿಗಳು ವಾಯುನೆಲೆಯಲ್ಲಿ ಉಪಸ್ಥಿತರಿದ್ದರು.
ಫ್ರಾನ್ಸ್ನ ಡಸಾಲ್ಟ್ ಏವಿಯೇಷನ್ ನಿರ್ಮಿತ ರಫೆಲ್ ಯುದ್ಧವಿಮಾನವು ಭಾರತವನ್ನು ತಲುಪಿದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಐದು ರಫೇಲ್ ಯುದ್ಧ ವಿಮಾನಗಳು ಹರಿಯಾಣಕ್ಕೆ ತಲುಪಿವೆ. ಈ ಮೂಲಕ ಭಾರತೀಯ ಸೇನೆಯ ಇತಿಹಾಸದಲ್ಲೇ ಹೊಸ ಶಕೆ ಆರಂಭವಾಗಲಿದೆ ಎಂದು ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.
4 ವರ್ಷಗಳ ಹಿಂದೆ ಭಾರತ ಸರ್ಕಾರ 59000 ಕೋಟಿ ರು. ವೆಚ್ಚದಲ್ಲಿ 36 ರಫೇಲ್ ಖರೀದಿಗೆ ಒಪ್ಪಂದ ಮಾಡಿಕೊಂಡಿತ್ತು. ಈ ಪೈಕಿ ಮೊದಲ 5 ವಿಮಾನ ಇದೀಗ ಹಸ್ತಾಂತರವಾಗಿದೆ. ಉಳಿದ ಎಲ್ಲಾ ವಿಮಾನಗಳು 2021ರ ಅಂತ್ಯದೊಳಗೆ ಭಾರತಕ್ಕೆ ಬರಲಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…