Advertisement
ಜಿಲ್ಲೆ

ಅಂಬಿಕಾದಲ್ಲಿ ಸಿ.ಎ. ಕೋಚಿಂಗ್ ಉದ್ಘಾಟನೆ

Share

ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.

ಅವರು  ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು.  ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ  ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್‍ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

6 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

8 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

14 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

14 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

21 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

22 hours ago