ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.
ಅವರು ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು. ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…