ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.
ಅವರು ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು. ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…