Advertisement
ಕಾರ್ಯಕ್ರಮಗಳು

ಅಂಬಿಕಾ ಬಾಲವಿದ್ಯಾಲಯದಲ್ಲಿ ಅಜ್ಜ-ಅಜ್ಜಿ ಮೊಮ್ಮಕ್ಕಳ ಸಮ್ಮಿಲನ -ಇದು “ಬಾಂಧವ್ಯ”

Share

ಪುತ್ತೂರು : ಬಪ್ಪಳಿಗೆಯ ಅಂಬಿಕಾ ಬಾಲ ವಿದ್ಯಾಲಯದಲ್ಲಿ ನ.11 ರಂದು ಅಜ್ಜ-ಅಜ್ಜಿ ಮೊಮ್ಮಕ್ಕಳ ಸಮ್ಮಿಲನ ಕಾರ್ಯಕ್ರಮವು ಸಂಸ್ಥೆಯ ಸಂಚಾಲಕರಾದ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆಯಲ್ಲಿ ನಡೆಯಿತು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಪ್ರೊಫೆಸರ್ ವಿ.ಬಿ ಅರ್ತಿಕಜೆ ,ಮಣ್ಣಿನಲ್ಲಿ ಬೀಜಗಳನ್ನು ಬಿತ್ತಿ ನೀರೆರೆವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೆಯೊಂದು ತನ್ನ ಅರ್ಥ ಕಂಡುಕೊಳ್ಳುವುದು, ಮಕ್ಕಳು ಮೊಮ್ಮಕ್ಕಳ ಜೊತೆಗೆ ಮನೆಯ ಹಿರಿಯರು ನೆಮ್ಮದಿಯಿಂದ ಬದುಕು ಸವೆಸಿದಾಗ ಮಾತ್ರಾ. ನಮ್ಮದೇಶ ಅಂತಹ ವಿಶಿಷ್ಟ ಸಂಬಂಧಗಳ ನೆಲೆವೀಡು. ನಮ್ಮ ಜೀವನಾನುಭವಗಳನ್ನು ಧಾರೆಯೆರೆದು ಮುಂದಿನ ಪೀಳಿಗೆ ಬದುಕು ಕಟ್ಟಿಕೊಳ್ಳುವಲ್ಲಿ ನೆರವಾಗೋಣ ಎಂದು  ನುಡಿದರು.  ಈ ಸಂದರ್ಭದಲ್ಲಿ ಶಾಲಾ ವಾಚನಾಲಯಕ್ಕೆ ವಾಲ್ಮೀಕಿ ರಾಮಾಯಣ ಸಂಪುಟವನ್ನು ಕೊಡುಗೆಯಾಗಿ ಅವರು ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕ  ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಯಾವುದೇ ವೃದ್ಧಾಶ್ರಮ ಅನಾಥಾಶ್ರಮಗಳು ಇಲ್ಲದೆ ಇರುವ ನಾಡೊಂದು ನಿರ್ಮಾಣವಾಗಲಿ ಎಂದು ಶುಭ ಹಾರೈಸಿದರು.

ಸಂಚಾಲಕರು ಮುಖ್ಯ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟಿನ ಖಜಾಂಜಿ ರಾಜಶ್ರೀ ನಟ್ಟೋಜ, ಮುಖ್ಯೋಪಾಧ್ಯಾಯಿನಿ ಸುಜನೀ ಬೋರ್ಕರ್, ಸಹ ಮುಖ್ಯೋಪಾಧ್ಯಾಯಿನಿ ಮಾಲತಿ ಡಿ ಭಟ್ ಉಪಸ್ಥಿತರಿದ್ದರು.

ಕೆ.ಜಿ ವಿಭಾಗದ ಶಿಕ್ಷಕಿ ಮಾಲತಿ ಶೆಟ್ಟಿ ಅತಿಥಿಗಳ ಪರಿಚಯಿಸಿದರು. ಎಲ್.ಕೆ.ಜಿ ಯ ಮೈತ್ರೇಯಿ ಪ್ರಾರ್ಥಿಸಿದರು. ಚಿರಂಜೀವಿ ಮಯೂರ್ ಮಯ್ಯ ಸ್ವಾಗತಿಸಿ, ಖ್ಯಾತಿ ವಂದಿಸಿದರು.

 ಕಾರ್ಯಕ್ರಮಕ್ಕೆ ಸಂತಸದಿಂದ ಆಗಮಿಸಿದ ಪುಟಾಣಿಗಳು ಅವರೇ ತಯಾರಿಸಿದ ಗೂಡುದೀಪ , ಅಲಂಕಾರಿಕ ಹಣತೆಗಳಿಂದ ಶೃಂಗರಿಸಿದ ತುಂಬಿದ ಸಭೆಯಲ್ಲಿ ಅಜ್ಜ ಅಜ್ಜಿ ಮೊಮ್ಮಕ್ಕಳ ಸಮಾಗಮದ ವಿಶಿಷ್ಟವಾದ ಕಾರ್ಯಕ್ರಮವು ಅರ್ಥಪೂರ್ಣವಾಗಿ ಮೂಡಿಬಂದಿತ್ತು. ಸಮಾರಂಭದ ಕೊನೆಯಲ್ಲಿ ಆಜ್ಜ ಅಜ್ಜಿ ಮೊಮ್ಮಕ್ಕಳಿಗಾಗಿ ವಿವಿಧ ಆಟೋಟಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

37 minutes ago

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

2 hours ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

6 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

19 hours ago