ಅಂಬಿಕಾ ಮಹಾವಿದ್ಯಾಲಯ ಆರಂಭ

June 25, 2019
11:00 AM

ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.

ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror