ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…