ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…