ಪುತ್ತೂರು : ಅಂಬಿಕಾ ಮಹಾವಿದ್ಯಾಲಯವು ವಿದ್ಯುಕ್ತವಾಗಿ ಆರಂಭಗೊಂಡಿತು. ಸಮಾರಂಭದ ಅಧ್ಯಕ್ಷರಾದ ಹಾಗೂ ಆಡಳಿತ ಮಂಡಳಿಯ ಸದಸ್ಯರೂ ಆದ ಸುರೇಶ ಶೆಟ್ಟಿ ವಿಧ್ಯುಕ್ತವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತತ್ವಶಾಸ್ತ್ರವನ್ನೊಳಗೊಂಡ ಪಠ್ಯದ ಮಹತ್ವ, ಪ್ರತಿ ವಿದ್ಯಾರ್ಥಿಯ ಬಗ್ಗೆ ವ್ಯಕ್ತಿಗತ ಕಾಳಜಿಯ ವಿಚಾರ, ಮಹಾ ವಿದ್ಯಾಲಯದ ಸ್ಥಾಪನೆಯ ಸದುದ್ದೇಶವನ್ನು ತಿಳಿಸುತ್ತಾ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜರು ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜರು ಕಾಲೇಜಿನ ಚಟುವಟಿಕೆಗಳ ಮಾಹಿತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ಪ್ರಸನ್ನ ಭಟ್ ಶುಭ ಹಾರೈಸಿದರು. ತತ್ವಶಾಸ್ತ್ರದ ಸ್ನಾತಕೋತ್ತರ ಪದವೀಧರ ರಾಮಕೃಷ್ಣ ಮಠದ ರಂಜನ್ ಅವರು ತತ್ವಶಾಸ್ತ್ರದ ಮಹತ್ವವನ್ನು ತಿಳಿಸಿದರು.
ಉಪನ್ಯಾಸಕಿ ಶ್ವೇತಾ, ಪ್ರಾಚಾರ್ಯೆ ರಾಜಶ್ರೀ ನಟ್ಟೋಜ ಇವರು ವಿದ್ಯಾರ್ಥಿನಿಯರನ್ನು ಹಾಗೂ ಸಂಚಾಲಕರು ಮತ್ತು ಸುರೇಶ ಶೆಟ್ಟರು ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಶ್ರೀಕೃಷ್ಣ ಎಸ್ ನಟ್ಟೋಜ ಪ್ರಾರ್ಥಿಸಿದರು. ಉಪನ್ಯಾಸಕ ಗಣೇಶ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…