ಅಂಬಿಕಾ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ

January 5, 2020
8:32 PM

ಪುತ್ತೂರು : ಬಪ್ಪಳಿಗೆಯ ಅಂಬಿಕಾ ಬಾಲ ವಿದ್ಯಾಲಯದಲ್ಲಿ ಜ. 5ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಚದುರಂಗವು ಮಾನಸಿಕ ಏಕಾಗ್ರತೆ , ಶೈಕ್ಷಣಿಕ ಪ್ರಗತಿ, ಯೋಜನಾ ಬದ್ಧತೆ, ಸಮಯ ಪ್ರಜ್ಞೆ ಹಾಗೂ ಮನರಂಜನೆ ಎಲ್ಲಾ ವಿಚಾರಗಳಲ್ಲೂ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಉಪಯುಕ್ತ ಕ್ರೀಡೆ, ಭಾರತೀಯತೆಯನ್ನು ಉಳಿಸುವ ಪರಸ್ಪರ ಬಾಂಧವ್ಯವನ್ನು ಬೆಸೆಯುವ ಆಟವಾಗಿದೆ.

ಹತ್ತು ವರುಷಗಳಿಂದ ಈ ಚದುರಂಗ ಸ್ಪರ್ಧಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿರುವ ಅಂಬಿಕಾ ವಿದ್ಯಾ ಸಂಸ್ಥೆ ಹಾಗೂ ಇದರಲ್ಲಿ ಸ್ಪರ್ಧಿಸಲು ಬಂದಿರುವ ಎಲ್ಲಾ ಸ್ಪರ್ಧಿಗಳಿಗೂ ಅಭಿನಂದನೆಗಳು ಹಾಗೂ ಸಿ.ಬಿ.ಎಸ್.ಸಿ ಪಠ್ಯಕ್ರಮ ಅಳವಡಿಸುತ್ತಾ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನೊಂದು ಹೊಸ ಹೆಜ್ಜೆಯನ್ನು ಇಡುವುದಕ್ಕಣಿ ಮಾಡುವ ಈ ಸಂಸ್ಥೆಗೆ ಮತ್ತೊಮ್ಮೆ ಅಭಿನಂದನೆಗಳು ಎಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು ವಿದ್ಯುಕ್ತವಾಗಿ ದೀಪಬೆಳಗಿಸಿ ಉದ್ಘಾಟಿಸಿದ ಮುಖ್ಯ ಅಭ್ಯಾಗತರಾದ ಸುಳ್ಯ ಎನ್.ಎಮ್.ಸಿ ಪಿಯು ಕಾಲೇಜಿನ ಪ್ರಾಚಾರ್ಯೆ ಹರಿಣಿ ಪುತ್ತೂರಾಯ ಶುಭ ಹಾರೈಸಿದರು. ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಗೆಲ್ಲುವ ಆಶಾಭಾವನೆಯಿಂದ ಆಟವಾಡಿ ಎಂದು ಆಡಳಿತ ಮಂಡಳಿಯ ಸದಸ್ಯರಾದ ಸುರೇಶ್ ಶೆಟ್ಟಿ ತಿಳಿಸಿದರು.

ಮಕ್ಕಳ ಸರ್ವಾಂಗೀಣ ಸಾಧನೆಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ಒಂದಾಗಿದೆ . ಈ ಕಾರ್ಯಕ್ರಮಕ್ಕೆ ಹತ್ತು ವರ್ಷದಿಂದ ಪೋಷಕರು ಪ್ರೋತ್ಸಾಹವನ್ನು ಕೊಡುತ್ತಿದ್ದಾರೆ. ಇದರಿಂದ ಭಾರತೀಯತೆಯನ್ನು ಉಳಿಸಬೇಕಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು. ಚದುರಂಗ ಸ್ಪರ್ಧೆಯ ರುವಾರಿ ಸತ್ಯಪ್ರಸಾದ್ ಕೋಟೆ , ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಖಜಾಂಜಿ ರಾಜಶ್ರೀ ನಟ್ಟೋಜ , ವಿದ್ಯಾಲಯದ ಪ್ರಾಂಶುಪಾಲರಾದ ಸುಜನೀ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಮುಂತಾದ ತಾಲೂಕುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

ವಿದ್ಯಾರ್ಥಿಗಳಾದ ಸುಕೀರ್ತ, ಹಾಗೂ ಶ್ರೀಹರಿ ಪ್ರಾರ್ಥಿಸಿದರು. ಉಪನ್ಯಾಸಕ ರಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror