Advertisement
ಸುದ್ದಿಗಳು

ಅಂಬಿಕಾ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ

Share

ಪುತ್ತೂರು : ಬಪ್ಪಳಿಗೆಯ ಅಂಬಿಕಾ ಬಾಲ ವಿದ್ಯಾಲಯದಲ್ಲಿ ಜ. 5ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು. ಚದುರಂಗವು ಮಾನಸಿಕ ಏಕಾಗ್ರತೆ , ಶೈಕ್ಷಣಿಕ ಪ್ರಗತಿ, ಯೋಜನಾ ಬದ್ಧತೆ, ಸಮಯ ಪ್ರಜ್ಞೆ ಹಾಗೂ ಮನರಂಜನೆ ಎಲ್ಲಾ ವಿಚಾರಗಳಲ್ಲೂ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅತ್ಯಂತ ಉಪಯುಕ್ತ ಕ್ರೀಡೆ, ಭಾರತೀಯತೆಯನ್ನು ಉಳಿಸುವ ಪರಸ್ಪರ ಬಾಂಧವ್ಯವನ್ನು ಬೆಸೆಯುವ ಆಟವಾಗಿದೆ.

ಹತ್ತು ವರುಷಗಳಿಂದ ಈ ಚದುರಂಗ ಸ್ಪರ್ಧಾ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿರುವ ಅಂಬಿಕಾ ವಿದ್ಯಾ ಸಂಸ್ಥೆ ಹಾಗೂ ಇದರಲ್ಲಿ ಸ್ಪರ್ಧಿಸಲು ಬಂದಿರುವ ಎಲ್ಲಾ ಸ್ಪರ್ಧಿಗಳಿಗೂ ಅಭಿನಂದನೆಗಳು ಹಾಗೂ ಸಿ.ಬಿ.ಎಸ್.ಸಿ ಪಠ್ಯಕ್ರಮ ಅಳವಡಿಸುತ್ತಾ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನೊಂದು ಹೊಸ ಹೆಜ್ಜೆಯನ್ನು ಇಡುವುದಕ್ಕಣಿ ಮಾಡುವ ಈ ಸಂಸ್ಥೆಗೆ ಮತ್ತೊಮ್ಮೆ ಅಭಿನಂದನೆಗಳು ಎಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯನ್ನು ವಿದ್ಯುಕ್ತವಾಗಿ ದೀಪಬೆಳಗಿಸಿ ಉದ್ಘಾಟಿಸಿದ ಮುಖ್ಯ ಅಭ್ಯಾಗತರಾದ ಸುಳ್ಯ ಎನ್.ಎಮ್.ಸಿ ಪಿಯು ಕಾಲೇಜಿನ ಪ್ರಾಚಾರ್ಯೆ ಹರಿಣಿ ಪುತ್ತೂರಾಯ ಶುಭ ಹಾರೈಸಿದರು. ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ, ಗೆಲ್ಲುವ ಆಶಾಭಾವನೆಯಿಂದ ಆಟವಾಡಿ ಎಂದು ಆಡಳಿತ ಮಂಡಳಿಯ ಸದಸ್ಯರಾದ ಸುರೇಶ್ ಶೆಟ್ಟಿ ತಿಳಿಸಿದರು.

ಮಕ್ಕಳ ಸರ್ವಾಂಗೀಣ ಸಾಧನೆಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯು ಒಂದಾಗಿದೆ . ಈ ಕಾರ್ಯಕ್ರಮಕ್ಕೆ ಹತ್ತು ವರ್ಷದಿಂದ ಪೋಷಕರು ಪ್ರೋತ್ಸಾಹವನ್ನು ಕೊಡುತ್ತಿದ್ದಾರೆ. ಇದರಿಂದ ಭಾರತೀಯತೆಯನ್ನು ಉಳಿಸಬೇಕಾಗಿದೆ ಎಂದು ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಅಂಬಿಕಾ ಸಮೂಹ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಸ್ವಾಗತಿಸಿದರು. ಚದುರಂಗ ಸ್ಪರ್ಧೆಯ ರುವಾರಿ ಸತ್ಯಪ್ರಸಾದ್ ಕೋಟೆ , ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಖಜಾಂಜಿ ರಾಜಶ್ರೀ ನಟ್ಟೋಜ , ವಿದ್ಯಾಲಯದ ಪ್ರಾಂಶುಪಾಲರಾದ ಸುಜನೀ ಬೋರ್ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಪರ್ಧೆಗೆ ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ ಮುಂತಾದ ತಾಲೂಕುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.

ವಿದ್ಯಾರ್ಥಿಗಳಾದ ಸುಕೀರ್ತ, ಹಾಗೂ ಶ್ರೀಹರಿ ಪ್ರಾರ್ಥಿಸಿದರು. ಉಪನ್ಯಾಸಕ ರಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

36 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

55 minutes ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

1 hour ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

2 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

2 hours ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

6 hours ago