ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ.
ಕಿಡ್ನಿ ಸಮಸ್ಯೆಯಿಂದ ಮಿತ್ತೂರು ಏಮಾಜೆ ನಿವಾಸಿ ವಾಮನ ನಾಯ್ಕ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ಸಂದರ್ಭ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಲಾರಿ ಆಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ವಾಮನ ನಾಯ್ಕ ಅವರ ಪತ್ನಿ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರಿಗೆ ಗಾಯವಾಗಿದೆ.
ಅಪಘಾತ ನಡೆಸಿದ ಲಾರಿ ಪರಾರಿಯಾಗಲು ಯತ್ನಿಸಿತ್ತು, ಸ್ಥಳೀಯರು ಲಾರಿಯನ್ನು ತಡೆದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…