ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ.
ಕಿಡ್ನಿ ಸಮಸ್ಯೆಯಿಂದ ಮಿತ್ತೂರು ಏಮಾಜೆ ನಿವಾಸಿ ವಾಮನ ನಾಯ್ಕ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ಸಂದರ್ಭ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಲಾರಿ ಆಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ವಾಮನ ನಾಯ್ಕ ಅವರ ಪತ್ನಿ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರಿಗೆ ಗಾಯವಾಗಿದೆ.
ಅಪಘಾತ ನಡೆಸಿದ ಲಾರಿ ಪರಾರಿಯಾಗಲು ಯತ್ನಿಸಿತ್ತು, ಸ್ಥಳೀಯರು ಲಾರಿಯನ್ನು ತಡೆದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…