ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ.
ಕಿಡ್ನಿ ಸಮಸ್ಯೆಯಿಂದ ಮಿತ್ತೂರು ಏಮಾಜೆ ನಿವಾಸಿ ವಾಮನ ನಾಯ್ಕ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮಂಗಳವಾರ ರಾತ್ರಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಅಂಬುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವ ಸಂದರ್ಭ ಮಿತ್ತೂರು ಸಮೀಪದ ಪರ್ಲೊಟ್ಟು ಎಂಬಲ್ಲಿ ಲಾರಿ ಆಂಬುಲೆನ್ಸ್ಗೆ ಡಿಕ್ಕಿಯಾಗಿದೆ. ಆಂಬುಲೆನ್ಸ್ನಲ್ಲಿದ್ದ ರೋಗಿ ವಾಮನ ನಾಯ್ಕ ಅವರ ಪತ್ನಿ ಪಾರ್ವತಿ ಸ್ಥಳದಲ್ಲೇ ಮೃತಪಟ್ಟರೆ, ಇತರ ಮೂವರಿಗೆ ಗಾಯವಾಗಿದೆ.
ಅಪಘಾತ ನಡೆಸಿದ ಲಾರಿ ಪರಾರಿಯಾಗಲು ಯತ್ನಿಸಿತ್ತು, ಸ್ಥಳೀಯರು ಲಾರಿಯನ್ನು ತಡೆದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…