ಅಕ್ಕಿ ಗಿರಣಿ ಸೆಸ್ ದರ ಇಳಿಕೆ ಪರಿಶೀಲನೆ: ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ

December 20, 2019
7:50 PM

ಬೆಂಗಳೂರು: ಅಕ್ಕಿ ಗಿರಣಿಗಳಿಗೆ ವಿಧಿಸಲಾಗುವ ಸೆಸ್ ದರವನ್ನು ಶೇ. 1.5 ರಿಂದ ಶೇ. 1ಕ್ಕೆ ಇಳಿಸುವಂತೆ ಅಕ್ಕಿ ಗಿರಣಿಗಳ ಮಾಲೀಕರು ಮಾಡಿರುವ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದರು.

ಶಾಸಕ ಹಾಗೂ ಅಕ್ಕಿ ಗಿರಣಿಗಳ ಮಾಲೀಕರ ಸಂಘದ ಅಧ್ಯಕ್ಷ ಪರಣ್ಣ ಮುನವಳ್ಳಿ ನೇತೃತ್ವದ ನಿಯೋಗವು ಡಿ.20ರಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ನೆರೆಯ ರಾಜ್ಯಗಳಲ್ಲಿ ಅಕ್ಕಿ ಗಿರಣಿಗಳ ಮೇಲಿನ ಸೆಸ್ ಶೇ. 1 ರಷ್ಟಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ಶೇ. 1.5 ರಷ್ಟಿದೆ. ಈಗಾಗಲೇ ಕಳೆದ ವರ್ಷ ಮಳೆ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಗಿರಣಿಗಳು ನಷ್ಟದಲ್ಲಿದ್ದು, ಸೆಸ್ ದರವನ್ನು ಶೇ. 1 ಕ್ಕೆ ಇಳಿಸುವಂತೆ ಮನವಿ ಮಾಡಿತು. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಇದೀಗ ಸಿದ್ಧವಾಗುತ್ತಿರುವ ನೂತನ ಕೈಗಾರಿಕಾ ನೀತಿಯಲ್ಲಿ ಅಕ್ಕಿ ಗಿರಣಿಗಳ ಆಧುನೀಕರಣಕ್ಕೆ ನೆರವು ನೀಡುವ ಕಾರ್ಯಕ್ರಮ ರೂಪಿಸುವಾಗ ದೊಡ್ಡ ಹಾಗೂ ಸಣ್ಣ ಅಕ್ಕಿ ಗಿರಣಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಸಮ್ಮತಿ ನೀಡಿದರು. ಸ್ಥಳೀಯ ಸಂಸ್ಥೆಗಳು ಅಕ್ಕಿ ಗಿರಣಿಗಳಿಗೆ ವಾಣಿಜ್ಯ ದರದಲ್ಲಿ ತೆರಿಗೆ ವಿಧಿಸುತ್ತಿದ್ದು, ಆಸ್ತಿಗಿಂತ ಆಸ್ತಿ ತೆರಿಗೆಯೇ ಹೊರೆಯಾಗಿದೆ. ಅಕ್ಕಿ ಗಿರಣಿಗಳನ್ನು ಕೃಷಿ ಆಧಾರಿತ ಕೈಗಾರಿಕೆಯೆಂದು ಪರಿಗಣಿಸಿ, ಆಸ್ತಿ ತೆರಿಗೆಯನ್ನು ಕೈಗಾರಿಕಾ ದರದಲ್ಲಿ ವಿಧಿಸಬೇಕು ಎಂದು ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror