Advertisement
ಸುದ್ದಿಗಳು

ಅಕ್ಕಿ ಗಿರಣಿ ಸೆಸ್ ದರ ಇಳಿಕೆ ಪರಿಶೀಲನೆ: ಮುಖ್ಯಮಂತ್ರಿ ಬಿ..ಎಸ್. ಯಡಿಯೂರಪ್ಪ

Share

ಬೆಂಗಳೂರು: ಅಕ್ಕಿ ಗಿರಣಿಗಳಿಗೆ ವಿಧಿಸಲಾಗುವ ಸೆಸ್ ದರವನ್ನು ಶೇ. 1.5 ರಿಂದ ಶೇ. 1ಕ್ಕೆ ಇಳಿಸುವಂತೆ ಅಕ್ಕಿ ಗಿರಣಿಗಳ ಮಾಲೀಕರು ಮಾಡಿರುವ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದರು.

ಶಾಸಕ ಹಾಗೂ ಅಕ್ಕಿ ಗಿರಣಿಗಳ ಮಾಲೀಕರ ಸಂಘದ ಅಧ್ಯಕ್ಷ ಪರಣ್ಣ ಮುನವಳ್ಳಿ ನೇತೃತ್ವದ ನಿಯೋಗವು ಡಿ.20ರಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿತು. ಈ ಸಂದರ್ಭದಲ್ಲಿ ನೆರೆಯ ರಾಜ್ಯಗಳಲ್ಲಿ ಅಕ್ಕಿ ಗಿರಣಿಗಳ ಮೇಲಿನ ಸೆಸ್ ಶೇ. 1 ರಷ್ಟಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ಅಂದರೆ ಶೇ. 1.5 ರಷ್ಟಿದೆ. ಈಗಾಗಲೇ ಕಳೆದ ವರ್ಷ ಮಳೆ ಕೊರತೆ ಮತ್ತು ಇತರ ಸಮಸ್ಯೆಗಳಿಂದಾಗಿ ಗಿರಣಿಗಳು ನಷ್ಟದಲ್ಲಿದ್ದು, ಸೆಸ್ ದರವನ್ನು ಶೇ. 1 ಕ್ಕೆ ಇಳಿಸುವಂತೆ ಮನವಿ ಮಾಡಿತು. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement

ಇದೀಗ ಸಿದ್ಧವಾಗುತ್ತಿರುವ ನೂತನ ಕೈಗಾರಿಕಾ ನೀತಿಯಲ್ಲಿ ಅಕ್ಕಿ ಗಿರಣಿಗಳ ಆಧುನೀಕರಣಕ್ಕೆ ನೆರವು ನೀಡುವ ಕಾರ್ಯಕ್ರಮ ರೂಪಿಸುವಾಗ ದೊಡ್ಡ ಹಾಗೂ ಸಣ್ಣ ಅಕ್ಕಿ ಗಿರಣಿಗಳನ್ನು ಸಮಾನವಾಗಿ ಪರಿಗಣಿಸಬೇಕು ಎಂದು ಮಾಡಿದ ಮನವಿಗೆ ಮುಖ್ಯಮಂತ್ರಿಗಳು ಸಮ್ಮತಿ ನೀಡಿದರು. ಸ್ಥಳೀಯ ಸಂಸ್ಥೆಗಳು ಅಕ್ಕಿ ಗಿರಣಿಗಳಿಗೆ ವಾಣಿಜ್ಯ ದರದಲ್ಲಿ ತೆರಿಗೆ ವಿಧಿಸುತ್ತಿದ್ದು, ಆಸ್ತಿಗಿಂತ ಆಸ್ತಿ ತೆರಿಗೆಯೇ ಹೊರೆಯಾಗಿದೆ. ಅಕ್ಕಿ ಗಿರಣಿಗಳನ್ನು ಕೃಷಿ ಆಧಾರಿತ ಕೈಗಾರಿಕೆಯೆಂದು ಪರಿಗಣಿಸಿ, ಆಸ್ತಿ ತೆರಿಗೆಯನ್ನು ಕೈಗಾರಿಕಾ ದರದಲ್ಲಿ ವಿಧಿಸಬೇಕು ಎಂದು ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

15 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

15 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago