ನೆಲ್ಯಾಡಿ : ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಮಂಗಳವಾರ ಬೆಳಗ್ಗೆ ನೆಲ್ಯಾಡಿ ಬಳಿ ನೆಲ್ಯಾಡಿ ಹೊರಠಾಣೆಯ ಹಾಗೂ ಉಪ್ಪಿನಂಗಡಿ ಠಾಣೆ ಪೊಲೀಸರು ಪತ್ತೆ ಹಚ್ಚಿ 29 ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವೇಗವಾಗಿ ಬರುತ್ತಿದ್ದ ಲಾರಿ ಗುಂಡ್ಯದಲ್ಲಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು ಅಲ್ಲಿನ ಸಾರ್ವಜನಿಕರು ನೀಡಿದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ನೆಲ್ಯಾಡಿ ಬೆಥನಿ ಶಾಲಾ ಬಳಿ ಲಾರಿಯನ್ನು ತಡೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಲಾರಿಯಲ್ಲಿದ್ದ ಒಬ್ಬನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…