ಮಡಿಕೇರಿ : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಆಧಾರವಾಗಿಟ್ಟುಕೊಂಡು ಜೂಜಾಟದ ದಂಧೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಕಳೆದ ಕೆಲವು ತಿಂಗಳುಗಳಿಂದ ಪಟ್ಟಣದ ವಿವಿಧೆಡೆ ಕೇರಳ ರಾಜ್ಯದ ಲಾಟರಿ ಅಕ್ರಮವಾಗಿ ಮಾರಾಟವಾಗುತ್ತಿತ್ತು. ಸಾರ್ವಜನಿಕರ ದೂರನ್ನು ಆಧರಿಸಿ ಖಚಿತ ಮಾಹಿತಿಯನ್ವಯ ದಂಧೆ ನಡೆಯುತ್ತಿದ್ದ ಪ್ರದೇಶಗಳಿಗೆ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ವರ್ತಕರಾಗಿರುವ ಕೆ.ಎಂ.ರಶೀದ್, ವಿನೋದ್, ಸಂಶುದ್ದೀನ್ ಹಾಗೂ ಎಂ.ಎಂ.ಮೊಯ್ದು ಬಂಧಿತ ಆರೋಪಿಗಳು. ಕೇರಳ ರಾಜ್ಯದ ಟಿಕೆಟ್ನ ಕೊನೆಯ ಮೂರು ಅಂಕಿಗಳ ಫಲಿತಾಂಶದ ಆಧಾರದ ಮೇಲೆ ಜೂಜಾಟ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 30,780 ರೂ. ನಗದು ವಶ ಪಡಿಸಿಕೊಂಡಿರುವ ಪೊಲೀಸರು ಪ್ರಮುಖ ಅರೋಪಿಯ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರುಗಳ ನಿರ್ದೇಶನದ ಮೇರೆಗೆ ಠಾಣಾಧಿಕಾರಿ ಮರಿಸ್ವಾಮಿ, ಎಎಸ್ಐ ಮಾದಯ್ಯ, ಸೋಮಯ್ಯ, ಮತ್ತು ಸಿಬ್ಬಂದಿಗಳಾದ ಸುನೀಲ್, ಮೋಹನ್, ಲೋಕೇಶ್, ಗಿರೀಶ್, ಮುನೀರ್, ಈರಪ್ಪ, ರಂಜನ್ ಕುಮಾರ್ ಮತ್ತು ಚಾಲಕ ಯೋಗೇಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…