ಮಡಿಕೇರಿ : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಆಧಾರವಾಗಿಟ್ಟುಕೊಂಡು ಜೂಜಾಟದ ದಂಧೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಕಳೆದ ಕೆಲವು ತಿಂಗಳುಗಳಿಂದ ಪಟ್ಟಣದ ವಿವಿಧೆಡೆ ಕೇರಳ ರಾಜ್ಯದ ಲಾಟರಿ ಅಕ್ರಮವಾಗಿ ಮಾರಾಟವಾಗುತ್ತಿತ್ತು. ಸಾರ್ವಜನಿಕರ ದೂರನ್ನು ಆಧರಿಸಿ ಖಚಿತ ಮಾಹಿತಿಯನ್ವಯ ದಂಧೆ ನಡೆಯುತ್ತಿದ್ದ ಪ್ರದೇಶಗಳಿಗೆ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ವರ್ತಕರಾಗಿರುವ ಕೆ.ಎಂ.ರಶೀದ್, ವಿನೋದ್, ಸಂಶುದ್ದೀನ್ ಹಾಗೂ ಎಂ.ಎಂ.ಮೊಯ್ದು ಬಂಧಿತ ಆರೋಪಿಗಳು. ಕೇರಳ ರಾಜ್ಯದ ಟಿಕೆಟ್ನ ಕೊನೆಯ ಮೂರು ಅಂಕಿಗಳ ಫಲಿತಾಂಶದ ಆಧಾರದ ಮೇಲೆ ಜೂಜಾಟ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 30,780 ರೂ. ನಗದು ವಶ ಪಡಿಸಿಕೊಂಡಿರುವ ಪೊಲೀಸರು ಪ್ರಮುಖ ಅರೋಪಿಯ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರುಗಳ ನಿರ್ದೇಶನದ ಮೇರೆಗೆ ಠಾಣಾಧಿಕಾರಿ ಮರಿಸ್ವಾಮಿ, ಎಎಸ್ಐ ಮಾದಯ್ಯ, ಸೋಮಯ್ಯ, ಮತ್ತು ಸಿಬ್ಬಂದಿಗಳಾದ ಸುನೀಲ್, ಮೋಹನ್, ಲೋಕೇಶ್, ಗಿರೀಶ್, ಮುನೀರ್, ಈರಪ್ಪ, ರಂಜನ್ ಕುಮಾರ್ ಮತ್ತು ಚಾಲಕ ಯೋಗೇಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…