Advertisement
ಅಪರಾಧ

ಅಕ್ರಮ ಲಾಟರಿ ದಂಧೆ : ನಾಲ್ವರ ಬಂಧನ

Share

ಮಡಿಕೇರಿ  : ವಿರಾಜಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಆಧಾರವಾಗಿಟ್ಟುಕೊಂಡು ಜೂಜಾಟದ ದಂಧೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟ ನಿಷೇಧವಾಗಿದ್ದರೂ ಕಳೆದ ಕೆಲವು ತಿಂಗಳುಗಳಿಂದ ಪಟ್ಟಣದ ವಿವಿಧೆಡೆ ಕೇರಳ ರಾಜ್ಯದ ಲಾಟರಿ ಅಕ್ರಮವಾಗಿ ಮಾರಾಟವಾಗುತ್ತಿತ್ತು. ಸಾರ್ವಜನಿಕರ ದೂರನ್ನು ಆಧರಿಸಿ ಖಚಿತ ಮಾಹಿತಿಯನ್ವಯ ದಂಧೆ ನಡೆಯುತ್ತಿದ್ದ ಪ್ರದೇಶಗಳಿಗೆ ಏಕಕಾಲಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವರ್ತಕರಾಗಿರುವ ಕೆ.ಎಂ.ರಶೀದ್, ವಿನೋದ್, ಸಂಶುದ್ದೀನ್ ಹಾಗೂ ಎಂ.ಎಂ.ಮೊಯ್ದು ಬಂಧಿತ ಆರೋಪಿಗಳು. ಕೇರಳ ರಾಜ್ಯದ ಟಿಕೆಟ್‍ನ ಕೊನೆಯ ಮೂರು ಅಂಕಿಗಳ ಫಲಿತಾಂಶದ ಆಧಾರದ ಮೇಲೆ ಜೂಜಾಟ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ 30,780 ರೂ. ನಗದು ವಶ ಪಡಿಸಿಕೊಂಡಿರುವ ಪೊಲೀಸರು ಪ್ರಮುಖ ಅರೋಪಿಯ ಪತ್ತೆಗಾಗಿ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಜಯಕುಮಾರ್, ವೃತ್ತ ನಿರೀಕ್ಷಕ ಕ್ಯಾತೇಗೌಡ ಅವರುಗಳ ನಿರ್ದೇಶನದ ಮೇರೆಗೆ ಠಾಣಾಧಿಕಾರಿ ಮರಿಸ್ವಾಮಿ, ಎಎಸ್‍ಐ ಮಾದಯ್ಯ, ಸೋಮಯ್ಯ, ಮತ್ತು ಸಿಬ್ಬಂದಿಗಳಾದ ಸುನೀಲ್, ಮೋಹನ್, ಲೋಕೇಶ್, ಗಿರೀಶ್, ಮುನೀರ್, ಈರಪ್ಪ, ರಂಜನ್ ಕುಮಾರ್ ಮತ್ತು ಚಾಲಕ ಯೋಗೇಶ್ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

14 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

23 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

24 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago