ಅಪರಾಧ

ಅಕ್ರಮ ಶ್ರೀಗಂಧ ಸಾಗಾಟ ಯತ್ನ : ಕುಶಾಲನಗರದ ಆನೆಕಾಡು ಬಳಿ ಇಬ್ಬರ ಬಂಧನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ : ಕರ್ನಾಟಕದ ಮೂಲಕ ಆಂಧ್ರಪ್ರದೇಶಕ್ಕೆ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಸುಮಾರು 9 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

Advertisement

ಬಂಧಿತರನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚಂಗಲ ಗ್ರಾಮದ ದಿ. ಮಹಮ್ಮದ್ ಅವರ ಪುತ್ರರಾದ ಷರೀಫ್ ಹಾಗೂ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಟ್ಟು 10 ಚೀಲದಲ್ಲಿದ್ದ 175 ಕೆಜಿ ಶ್ರೀಗಂಧ ತುಂಡುಗಳು, ಎರಡು ಚಿಕ್ಕ ಡಿಜಿಟಲ್ ಸ್ಕೇಲ್ ಹಾಗೂ ಆಂಧ್ರಪ್ರದೇಶ ರಾಜ್ಯದ ನೋಂದಣಿ ಹೊಂದಿರುವ ಮಹೀಂದ್ರ ವೆರಿಟೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲಿನ ಒಟ್ಟು ಮೌಲ್ಯ ಸುಮಾರು 9 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಆರೋಪಿಗಳು ಸ್ವಲ್ಪಸ್ವಲ್ಪವೇ ಶ್ರೀಗಂಧ ತುಂಡುಗಳನ್ನು ಕಲೆಹಾಕಿ ಆಂಧ್ರಪ್ರದೇಶದ ಶ್ರೀಗಂಧದ ಎಣ್ಣೆ ತೆಗೆಯುವ ಫ್ಯಾಕ್ಟರಿಗೆ ಮಾರಾಟ ಮಾಡುವುದನ್ನು ರೂಢಿಗತ ಮಾಡಿಕೊಂಡಿದ್ದರೆಂದು ವಿಚಾರಣೆ ಸಂದರ್ಭ ಬೆಳಕಿಗೆ ಬಂದಿದೆ. ವಾಹನ ಪರಿಶೀಲನೆ ವೇಳೆ ಆರೋಪಿಗಳು ಕಾರಿನ ಹಿಂಬದಿಯ ಸೀಟಿನ ಹಿಂದೆ ಯಾರಿಗೂ ಕಾಣದ ರೀತಿಯಲ್ಲಿ ಶ್ರೀಗಂಧ ತುಂಡುಗಳನ್ನು ಶೇಖರಣೆ ಮಾಡುವ ಒಂದು ಡಬ್ಬವನ್ನು ನಿರ್ಮಿಸಿದ್ದು ಕಂಡು ಬಂದಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಾ. ಸುಮನ್ ಡಿಪಿ ಹಾಗೂ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪಿ.ಕೆ. ಮುರಳೀಧರ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಇನ್ಸ್ ಪೆಕ್ಟರ್ ಎನ್ ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಹಮೀದ್, ಯೋಗೇಶ್ ಕುಮಾರ್, ವೆಂಕಟೇಶ್, ಅನಿಲ್ ಕುಮಾರ್, ವಸಂತ, ಕುಶಾಲನಗರ ವೃತ್ತದ ಅಪರಾಧ ದಳದ ಸಿಬ್ಬಂದಿಗಳಾದ ಜೋಸೆಫ್, ಪ್ರಕಾಶ್, ಸಜಿ, ಸಂದೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

2 hours ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

5 hours ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

5 hours ago

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

1 day ago