Advertisement
ಅಪರಾಧ

ಅಕ್ರಮ ಶ್ರೀಗಂಧ ಸಾಗಾಟ ಯತ್ನ : ಕುಶಾಲನಗರದ ಆನೆಕಾಡು ಬಳಿ ಇಬ್ಬರ ಬಂಧನ

Share

ಮಡಿಕೇರಿ : ಕರ್ನಾಟಕದ ಮೂಲಕ ಆಂಧ್ರಪ್ರದೇಶಕ್ಕೆ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಸುಮಾರು 9 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚಂಗಲ ಗ್ರಾಮದ ದಿ. ಮಹಮ್ಮದ್ ಅವರ ಪುತ್ರರಾದ ಷರೀಫ್ ಹಾಗೂ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಟ್ಟು 10 ಚೀಲದಲ್ಲಿದ್ದ 175 ಕೆಜಿ ಶ್ರೀಗಂಧ ತುಂಡುಗಳು, ಎರಡು ಚಿಕ್ಕ ಡಿಜಿಟಲ್ ಸ್ಕೇಲ್ ಹಾಗೂ ಆಂಧ್ರಪ್ರದೇಶ ರಾಜ್ಯದ ನೋಂದಣಿ ಹೊಂದಿರುವ ಮಹೀಂದ್ರ ವೆರಿಟೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲಿನ ಒಟ್ಟು ಮೌಲ್ಯ ಸುಮಾರು 9 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಆರೋಪಿಗಳು ಸ್ವಲ್ಪಸ್ವಲ್ಪವೇ ಶ್ರೀಗಂಧ ತುಂಡುಗಳನ್ನು ಕಲೆಹಾಕಿ ಆಂಧ್ರಪ್ರದೇಶದ ಶ್ರೀಗಂಧದ ಎಣ್ಣೆ ತೆಗೆಯುವ ಫ್ಯಾಕ್ಟರಿಗೆ ಮಾರಾಟ ಮಾಡುವುದನ್ನು ರೂಢಿಗತ ಮಾಡಿಕೊಂಡಿದ್ದರೆಂದು ವಿಚಾರಣೆ ಸಂದರ್ಭ ಬೆಳಕಿಗೆ ಬಂದಿದೆ. ವಾಹನ ಪರಿಶೀಲನೆ ವೇಳೆ ಆರೋಪಿಗಳು ಕಾರಿನ ಹಿಂಬದಿಯ ಸೀಟಿನ ಹಿಂದೆ ಯಾರಿಗೂ ಕಾಣದ ರೀತಿಯಲ್ಲಿ ಶ್ರೀಗಂಧ ತುಂಡುಗಳನ್ನು ಶೇಖರಣೆ ಮಾಡುವ ಒಂದು ಡಬ್ಬವನ್ನು ನಿರ್ಮಿಸಿದ್ದು ಕಂಡು ಬಂದಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಾ. ಸುಮನ್ ಡಿಪಿ ಹಾಗೂ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪಿ.ಕೆ. ಮುರಳೀಧರ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಇನ್ಸ್ ಪೆಕ್ಟರ್ ಎನ್ ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಹಮೀದ್, ಯೋಗೇಶ್ ಕುಮಾರ್, ವೆಂಕಟೇಶ್, ಅನಿಲ್ ಕುಮಾರ್, ವಸಂತ, ಕುಶಾಲನಗರ ವೃತ್ತದ ಅಪರಾಧ ದಳದ ಸಿಬ್ಬಂದಿಗಳಾದ ಜೋಸೆಫ್, ಪ್ರಕಾಶ್, ಸಜಿ, ಸಂದೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

21 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago