Advertisement
ಅಪರಾಧ

ಅಕ್ರಮ ಶ್ರೀಗಂಧ ಸಾಗಾಟ ಯತ್ನ : ಕುಶಾಲನಗರದ ಆನೆಕಾಡು ಬಳಿ ಇಬ್ಬರ ಬಂಧನ

Share

ಮಡಿಕೇರಿ : ಕರ್ನಾಟಕದ ಮೂಲಕ ಆಂಧ್ರಪ್ರದೇಶಕ್ಕೆ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಕಾಸರಗೋಡು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಅಪರಾಧ ಪತ್ತೆ ದಳದ ಸಿಬ್ಬಂದಿಗಳು ಯಶಸ್ವಿಯಾಗಿದ್ದು, ಸುಮಾರು 9 ಲಕ್ಷ ರೂ. ಮೌಲ್ಯದ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚಂಗಲ ಗ್ರಾಮದ ದಿ. ಮಹಮ್ಮದ್ ಅವರ ಪುತ್ರರಾದ ಷರೀಫ್ ಹಾಗೂ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಟ್ಟು 10 ಚೀಲದಲ್ಲಿದ್ದ 175 ಕೆಜಿ ಶ್ರೀಗಂಧ ತುಂಡುಗಳು, ಎರಡು ಚಿಕ್ಕ ಡಿಜಿಟಲ್ ಸ್ಕೇಲ್ ಹಾಗೂ ಆಂಧ್ರಪ್ರದೇಶ ರಾಜ್ಯದ ನೋಂದಣಿ ಹೊಂದಿರುವ ಮಹೀಂದ್ರ ವೆರಿಟೊ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾಲಿನ ಒಟ್ಟು ಮೌಲ್ಯ ಸುಮಾರು 9 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಆರೋಪಿಗಳು ಸ್ವಲ್ಪಸ್ವಲ್ಪವೇ ಶ್ರೀಗಂಧ ತುಂಡುಗಳನ್ನು ಕಲೆಹಾಕಿ ಆಂಧ್ರಪ್ರದೇಶದ ಶ್ರೀಗಂಧದ ಎಣ್ಣೆ ತೆಗೆಯುವ ಫ್ಯಾಕ್ಟರಿಗೆ ಮಾರಾಟ ಮಾಡುವುದನ್ನು ರೂಢಿಗತ ಮಾಡಿಕೊಂಡಿದ್ದರೆಂದು ವಿಚಾರಣೆ ಸಂದರ್ಭ ಬೆಳಕಿಗೆ ಬಂದಿದೆ. ವಾಹನ ಪರಿಶೀಲನೆ ವೇಳೆ ಆರೋಪಿಗಳು ಕಾರಿನ ಹಿಂಬದಿಯ ಸೀಟಿನ ಹಿಂದೆ ಯಾರಿಗೂ ಕಾಣದ ರೀತಿಯಲ್ಲಿ ಶ್ರೀಗಂಧ ತುಂಡುಗಳನ್ನು ಶೇಖರಣೆ ಮಾಡುವ ಒಂದು ಡಬ್ಬವನ್ನು ನಿರ್ಮಿಸಿದ್ದು ಕಂಡು ಬಂದಿರುತ್ತದೆ.

ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಾ. ಸುಮನ್ ಡಿಪಿ ಹಾಗೂ ಸೋಮವಾರಪೇಟೆ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪಿ.ಕೆ. ಮುರಳೀಧರ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳದ ಇನ್ಸ್ ಪೆಕ್ಟರ್ ಎನ್ ಮಹೇಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಹಮೀದ್, ಯೋಗೇಶ್ ಕುಮಾರ್, ವೆಂಕಟೇಶ್, ಅನಿಲ್ ಕುಮಾರ್, ವಸಂತ, ಕುಶಾಲನಗರ ವೃತ್ತದ ಅಪರಾಧ ದಳದ ಸಿಬ್ಬಂದಿಗಳಾದ ಜೋಸೆಫ್, ಪ್ರಕಾಶ್, ಸಜಿ, ಸಂದೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 hour ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 hour ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago