ಪುತ್ತೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ (ರಿ) ಪುತ್ತೂರು ಇದರ ನೂತನ ಅಧ್ಯಕ್ಷರಾಗಿ ಕೋಡಪದವಿನ ಕಿನಿಲ ಅಶೋಕ್, ಕಾರ್ಯದರ್ಶಿಯಾಗಿ ಮಹೇಶ್ ಪುಚ್ಚಪ್ಪಾಡಿ ಮತ್ತು ಉಪಾಧ್ಯಕ್ಷರಾಗಿ ಕುಕ್ಕುಜಡ್ಕದ ಎಂ.ಜಿ.ಸತ್ಯನಾರಾಯಣ, ಕೆ.ವಿಶ್ವನಾಥ ರಾವ್ ಸುಳ್ಯ ಇವರು ಆಯ್ಕೆಯಾಗಿದ್ದಾರೆ.
ಡಿ.30 ರಂದು ಪುತ್ತೂರು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದ ‘ಚುಂಚಶ್ರೀ ಸಭಾಭವನ’ದಲ್ಲಿ ಜರುಗಿದ ಸಂಘದ ಮಹಾಸಭೆಯಲ್ಲಿ ಕಾರ್ಯಕಾರಿ ಸಮಿತಿ ರಚಿಸಿ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಕಾರ್ಯದರ್ಶಿ ಕಿನಿಲ ಅಶೋಕ್ ವರದಿ, ಲೆಕ್ಕಪತ್ರಗಳನ್ನು ಮಂಡಿಸಿದರು. ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಉಪಾಧ್ಯಕ್ಷ ಶಂ.ನಾ.ಖಂಡಿಗೆ ಆಗಮಿಸಿ ಶುಭಕೋರಿದರು. ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಎ.ಆರ್.ಡಿ.ಎಫ್. ಕಾರ್ಯನಿರ್ವಹಣಾಧಿಕಾರಿ ಡಾ.ಕೇಶವ ಭಟ್ ಮೊದಲಾದವರು ಉಪಸ್ಥಿತರಿದ್ದರು.
“ಸಂಘಕ್ಕೆ ಯುವ ಕೃಷಿಕರು ಬರುವಂತಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ರೂಪುಗೊಂಡ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವನ್ನು ಹೊಸ ತಲೆಮಾರು ಇನ್ನಷ್ಟು ಸುದೃಢವಾಗಿ ಕಟ್ಟಿಬೆಳೆಸಬೇಕಾಗಿದೆ.” ಎಂದು ಮಂಚಿ ಶ್ರೀನಿವಾಸ ಆಚಾರ್ ಅಭಿಪ್ರಾಯಪಟ್ಟರು.
ಕಿನಿಲ ಅಶೋಕ ಸ್ವಾಗತಿಸಿದರು. ಹಿರಿಯ ಸದಸ್ಯ ವಿ.ಮ.ಭಟ್ ಅಡ್ಯನಡ್ಕ ಪ್ರಾರ್ಥಿಸಿದರು. ನೂತನ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…