ಕೃಷಿ

ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ

Share

ಪುತ್ತೂರು: ಅಖಿಲ ಭಾರತ ಗೇರು ಬೆಳೆಗಾರರ ಸಂಘ ಇದೀಗ ಅಸ್ತಿತ್ವಕ್ಕೆ ಬಂದಿದೆ. ವಿವಿಧೆಡೆಗಳಿಂದ ಬಂದ ಕೃಷಿಕರು ಹಾಗೂ  ಕ್ಯಾಂಪ್ಕೋ ಅಧ್ಯಕ್ಷರಾದ ಸತೀಶ್ಚಂದ್ರ ಅವರ ಸಮ್ಮುಖದಲ್ಲಿ ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಪುತ್ತೂರಿನಲ್ಲಿ ರಾಷ್ಟ್ರಮಟ್ಟದ ಗೇರು ಕೃಷಿಕರ ಸಂಘಟನೆ ಆರಂಭವಾಗಿರುವುದು ಇದೀಗ ಬೆಳೆಗಾರರಿಗೆ ಉಪಯುಕ್ತವಾಗಿದೆ.

Advertisement

ರಾಷ್ಟ್ರದ ಗೇರು ಕೃಷಿಕರ ನಡುವೆ ಸಂವಹನ ಹೆಚ್ಚಿಸುವುದು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಟ್ಟದಲ್ಲಿ ಗೇರು ಬೆಳೆಗಾರರಿಗೆ ಧ್ವನಿ ನೀಡುವುದು, ವಿವಿಧ ಸಂಘ ಸಂಸ್ಥೆ ಹಾಗೂ ಇಲಾಖೆಗಳ ನಡುವಿನ ಸಂವಹನಕ್ಕೆ ಅನುವಾಗುವುದು, ವೈಜ್ಞಾನಿಕ ಗೇರು ಕೃಷಿ ಹಾಗೂ ಸಂಸ್ಕರಣಾ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಗೇರಿನಲ್ಲಿ ರೈತ ಉತ್ಪಾದಕ ಕಂಪನಿಗಳನ್ನು ಉತ್ತೇಜಿಸುವುದು, ಗೇರಿನ ಮಾರುಕಟ್ಟೆಗೆ ಉತ್ತೇಜನ ಹಾಗೂ ಗೇರು ಬೆಳೆಯ ಬಗ್ಗೆ ಮೇಳಗಳನ್ನು ಹಮ್ಮಿಕೊಳ್ಳುವುದು ಈ ಸಂಘಟನೆಯ ಮುಖ್ಯ ಉದ್ದೇಶಗಳಾಗಿವೆ.

ಸಂಘಟನೆಯ ಅಧ್ಯಕ್ಷರಾಗಿ ಪುತ್ತೂರಿನ  ಪ್ರಗತಿಪರ ಗೇರು ಬೆಳೆಗಾರ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನನ್ಯ ಅಚ್ಯುತ ಮೂಡತ್ತಾಯ  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಸರಗೋಡು ಪ್ರ್ಯಾಂತ್ಯದ ಗೇರು ಬೆಳೆಗಾರ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯದರ್ಶಿಯಾಗಿ ಯುವ ಮುಂದಾಳು  ದಕ್ಷಿಣ ಕನ್ನಡ ಜಿಲ್ಲೆಯ ಪುಣಚದ ದೇವಿಪ್ರಸಾದ್ ಕಲ್ಲಾಜೆ, ಜಂಟಿ ಕಾರ್ಯದರ್ಶಿಯಾಗಿ ಮಹಾರಾಷ್ಟ್ರದ  ವಿಲಾಸ್ ಅನಂತರಾವ್ ಠಾಕೂರ್, ಖಜಾಂಚಿಯಾಗಿ ದಕ್ಷಿಣ ಕನ್ನಡದ ಪ್ರಗತಿಪರ ಗೇರು ಕೃಷಿಕ ಸುಭಾಸ್ ರೈ ಕಡಮಜಲು ಆಯ್ಕೆಯಾಗಿದ್ದಾರೆ.

ಸಂಘಟನೆಯ ಟ್ರಸ್ಟಿಗಳನ್ನಾಗಿ ಬಂಟ್ವಾಳದ ಶಾಸಕ ಹಾಗೂ ಕೃಷಿಕರಾದ ಉಳಿಪಾಡಿಗುತ್ತು  ರಾಜೇಶ್ ನಾಯಕ್, ಗೇರು ಬೆಳೆಗಾರರಾದ ಕೇರಳದ ವಾಸವನ್, ಆಂಧ್ರಪ್ರದೇಶದ ಸೊಮೇಶ್ವರ ರಾವ್, ಗದಗದ ಗುರುನಾಥ ಓದುಗೌಡರ್, ದಕ್ಷಿಣ ಕನ್ನಡದ ಕಾಶ್ಮೀರ್ ಕುಟಿನೋ, ಉಡುಪಿಯ ಚಂದ್ರಶೇಖರ ಉಡುಪ, ಈಶ್ವರ ಮಂಗಲದ ನಟೇಶ್ ಮೂಡಾಯೂರು, ಬೆಳ್ತಂಗಡಿಯ ಸುಕನ್ಯಾ, ಸಾಗರದ ಉಳ್ಳೂರು ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೇರು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಎಂ.ಜಿ. ನಾಯಕ್ ಮತ್ತು ಹಿರಿಯ ವಿಜ್ಞಾನಿ ಡಾ. ಮೋಹನ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

2 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

2 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

14 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

15 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

16 hours ago