Advertisement
ಕೃಷಿ

ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ

Share

ಪುತ್ತೂರು: ಅಖಿಲ ಭಾರತ ಗೇರು ಬೆಳೆಗಾರರ ಸಂಘ ಇದೀಗ ಅಸ್ತಿತ್ವಕ್ಕೆ ಬಂದಿದೆ. ವಿವಿಧೆಡೆಗಳಿಂದ ಬಂದ ಕೃಷಿಕರು ಹಾಗೂ  ಕ್ಯಾಂಪ್ಕೋ ಅಧ್ಯಕ್ಷರಾದ ಸತೀಶ್ಚಂದ್ರ ಅವರ ಸಮ್ಮುಖದಲ್ಲಿ ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಪುತ್ತೂರಿನಲ್ಲಿ ರಾಷ್ಟ್ರಮಟ್ಟದ ಗೇರು ಕೃಷಿಕರ ಸಂಘಟನೆ ಆರಂಭವಾಗಿರುವುದು ಇದೀಗ ಬೆಳೆಗಾರರಿಗೆ ಉಪಯುಕ್ತವಾಗಿದೆ.

Advertisement
Advertisement
Advertisement
Advertisement

ರಾಷ್ಟ್ರದ ಗೇರು ಕೃಷಿಕರ ನಡುವೆ ಸಂವಹನ ಹೆಚ್ಚಿಸುವುದು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಟ್ಟದಲ್ಲಿ ಗೇರು ಬೆಳೆಗಾರರಿಗೆ ಧ್ವನಿ ನೀಡುವುದು, ವಿವಿಧ ಸಂಘ ಸಂಸ್ಥೆ ಹಾಗೂ ಇಲಾಖೆಗಳ ನಡುವಿನ ಸಂವಹನಕ್ಕೆ ಅನುವಾಗುವುದು, ವೈಜ್ಞಾನಿಕ ಗೇರು ಕೃಷಿ ಹಾಗೂ ಸಂಸ್ಕರಣಾ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಗೇರಿನಲ್ಲಿ ರೈತ ಉತ್ಪಾದಕ ಕಂಪನಿಗಳನ್ನು ಉತ್ತೇಜಿಸುವುದು, ಗೇರಿನ ಮಾರುಕಟ್ಟೆಗೆ ಉತ್ತೇಜನ ಹಾಗೂ ಗೇರು ಬೆಳೆಯ ಬಗ್ಗೆ ಮೇಳಗಳನ್ನು ಹಮ್ಮಿಕೊಳ್ಳುವುದು ಈ ಸಂಘಟನೆಯ ಮುಖ್ಯ ಉದ್ದೇಶಗಳಾಗಿವೆ.

Advertisement

ಸಂಘಟನೆಯ ಅಧ್ಯಕ್ಷರಾಗಿ ಪುತ್ತೂರಿನ  ಪ್ರಗತಿಪರ ಗೇರು ಬೆಳೆಗಾರ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನನ್ಯ ಅಚ್ಯುತ ಮೂಡತ್ತಾಯ  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಸರಗೋಡು ಪ್ರ್ಯಾಂತ್ಯದ ಗೇರು ಬೆಳೆಗಾರ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯದರ್ಶಿಯಾಗಿ ಯುವ ಮುಂದಾಳು  ದಕ್ಷಿಣ ಕನ್ನಡ ಜಿಲ್ಲೆಯ ಪುಣಚದ ದೇವಿಪ್ರಸಾದ್ ಕಲ್ಲಾಜೆ, ಜಂಟಿ ಕಾರ್ಯದರ್ಶಿಯಾಗಿ ಮಹಾರಾಷ್ಟ್ರದ  ವಿಲಾಸ್ ಅನಂತರಾವ್ ಠಾಕೂರ್, ಖಜಾಂಚಿಯಾಗಿ ದಕ್ಷಿಣ ಕನ್ನಡದ ಪ್ರಗತಿಪರ ಗೇರು ಕೃಷಿಕ ಸುಭಾಸ್ ರೈ ಕಡಮಜಲು ಆಯ್ಕೆಯಾಗಿದ್ದಾರೆ.

ಸಂಘಟನೆಯ ಟ್ರಸ್ಟಿಗಳನ್ನಾಗಿ ಬಂಟ್ವಾಳದ ಶಾಸಕ ಹಾಗೂ ಕೃಷಿಕರಾದ ಉಳಿಪಾಡಿಗುತ್ತು  ರಾಜೇಶ್ ನಾಯಕ್, ಗೇರು ಬೆಳೆಗಾರರಾದ ಕೇರಳದ ವಾಸವನ್, ಆಂಧ್ರಪ್ರದೇಶದ ಸೊಮೇಶ್ವರ ರಾವ್, ಗದಗದ ಗುರುನಾಥ ಓದುಗೌಡರ್, ದಕ್ಷಿಣ ಕನ್ನಡದ ಕಾಶ್ಮೀರ್ ಕುಟಿನೋ, ಉಡುಪಿಯ ಚಂದ್ರಶೇಖರ ಉಡುಪ, ಈಶ್ವರ ಮಂಗಲದ ನಟೇಶ್ ಮೂಡಾಯೂರು, ಬೆಳ್ತಂಗಡಿಯ ಸುಕನ್ಯಾ, ಸಾಗರದ ಉಳ್ಳೂರು ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಗೇರು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಎಂ.ಜಿ. ನಾಯಕ್ ಮತ್ತು ಹಿರಿಯ ವಿಜ್ಞಾನಿ ಡಾ. ಮೋಹನ್ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32…

10 mins ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

12 hours ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

12 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

12 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

12 hours ago

15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…

12 hours ago