Advertisement
ಕೃಷಿ

ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ

Share

ಪುತ್ತೂರು: ಅಖಿಲ ಭಾರತ ಗೇರು ಬೆಳೆಗಾರರ ಸಂಘ ಇದೀಗ ಅಸ್ತಿತ್ವಕ್ಕೆ ಬಂದಿದೆ. ವಿವಿಧೆಡೆಗಳಿಂದ ಬಂದ ಕೃಷಿಕರು ಹಾಗೂ  ಕ್ಯಾಂಪ್ಕೋ ಅಧ್ಯಕ್ಷರಾದ ಸತೀಶ್ಚಂದ್ರ ಅವರ ಸಮ್ಮುಖದಲ್ಲಿ ಅಖಿಲ ಭಾರತ ಗೇರು ಬೆಳೆಗಾರರ ಸಂಘ ಅಸ್ತಿತ್ವಕ್ಕೆ ಬಂದಿದೆ. ಪುತ್ತೂರಿನಲ್ಲಿ ರಾಷ್ಟ್ರಮಟ್ಟದ ಗೇರು ಕೃಷಿಕರ ಸಂಘಟನೆ ಆರಂಭವಾಗಿರುವುದು ಇದೀಗ ಬೆಳೆಗಾರರಿಗೆ ಉಪಯುಕ್ತವಾಗಿದೆ.

Advertisement

ರಾಷ್ಟ್ರದ ಗೇರು ಕೃಷಿಕರ ನಡುವೆ ಸಂವಹನ ಹೆಚ್ಚಿಸುವುದು, ಕೇಂದ್ರ ಮತ್ತು ರಾಜ್ಯ ಸರಕಾರಗಳ ಮಟ್ಟದಲ್ಲಿ ಗೇರು ಬೆಳೆಗಾರರಿಗೆ ಧ್ವನಿ ನೀಡುವುದು, ವಿವಿಧ ಸಂಘ ಸಂಸ್ಥೆ ಹಾಗೂ ಇಲಾಖೆಗಳ ನಡುವಿನ ಸಂವಹನಕ್ಕೆ ಅನುವಾಗುವುದು, ವೈಜ್ಞಾನಿಕ ಗೇರು ಕೃಷಿ ಹಾಗೂ ಸಂಸ್ಕರಣಾ ಮಾಹಿತಿಯನ್ನು ರೈತರಿಗೆ ತಲುಪಿಸುವುದು, ಗೇರಿನಲ್ಲಿ ರೈತ ಉತ್ಪಾದಕ ಕಂಪನಿಗಳನ್ನು ಉತ್ತೇಜಿಸುವುದು, ಗೇರಿನ ಮಾರುಕಟ್ಟೆಗೆ ಉತ್ತೇಜನ ಹಾಗೂ ಗೇರು ಬೆಳೆಯ ಬಗ್ಗೆ ಮೇಳಗಳನ್ನು ಹಮ್ಮಿಕೊಳ್ಳುವುದು ಈ ಸಂಘಟನೆಯ ಮುಖ್ಯ ಉದ್ದೇಶಗಳಾಗಿವೆ.

ಸಂಘಟನೆಯ ಅಧ್ಯಕ್ಷರಾಗಿ ಪುತ್ತೂರಿನ  ಪ್ರಗತಿಪರ ಗೇರು ಬೆಳೆಗಾರ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನನ್ಯ ಅಚ್ಯುತ ಮೂಡತ್ತಾಯ  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಾಸರಗೋಡು ಪ್ರ್ಯಾಂತ್ಯದ ಗೇರು ಬೆಳೆಗಾರ ಶಂಕರನಾರಾಯಣ ಭಟ್ ಖಂಡಿಗೆ, ಕಾರ್ಯದರ್ಶಿಯಾಗಿ ಯುವ ಮುಂದಾಳು  ದಕ್ಷಿಣ ಕನ್ನಡ ಜಿಲ್ಲೆಯ ಪುಣಚದ ದೇವಿಪ್ರಸಾದ್ ಕಲ್ಲಾಜೆ, ಜಂಟಿ ಕಾರ್ಯದರ್ಶಿಯಾಗಿ ಮಹಾರಾಷ್ಟ್ರದ  ವಿಲಾಸ್ ಅನಂತರಾವ್ ಠಾಕೂರ್, ಖಜಾಂಚಿಯಾಗಿ ದಕ್ಷಿಣ ಕನ್ನಡದ ಪ್ರಗತಿಪರ ಗೇರು ಕೃಷಿಕ ಸುಭಾಸ್ ರೈ ಕಡಮಜಲು ಆಯ್ಕೆಯಾಗಿದ್ದಾರೆ.

ಸಂಘಟನೆಯ ಟ್ರಸ್ಟಿಗಳನ್ನಾಗಿ ಬಂಟ್ವಾಳದ ಶಾಸಕ ಹಾಗೂ ಕೃಷಿಕರಾದ ಉಳಿಪಾಡಿಗುತ್ತು  ರಾಜೇಶ್ ನಾಯಕ್, ಗೇರು ಬೆಳೆಗಾರರಾದ ಕೇರಳದ ವಾಸವನ್, ಆಂಧ್ರಪ್ರದೇಶದ ಸೊಮೇಶ್ವರ ರಾವ್, ಗದಗದ ಗುರುನಾಥ ಓದುಗೌಡರ್, ದಕ್ಷಿಣ ಕನ್ನಡದ ಕಾಶ್ಮೀರ್ ಕುಟಿನೋ, ಉಡುಪಿಯ ಚಂದ್ರಶೇಖರ ಉಡುಪ, ಈಶ್ವರ ಮಂಗಲದ ನಟೇಶ್ ಮೂಡಾಯೂರು, ಬೆಳ್ತಂಗಡಿಯ ಸುಕನ್ಯಾ, ಸಾಗರದ ಉಳ್ಳೂರು ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗೇರು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಡಾ. ಎಂ.ಜಿ. ನಾಯಕ್ ಮತ್ತು ಹಿರಿಯ ವಿಜ್ಞಾನಿ ಡಾ. ಮೋಹನ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

8 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago