ಅಖಿಲ ಭಾರತ ಗೇರು ಬೆಳೆಗಾರರ ಸಂಘ ಸ್ಥಾಪನೆಗೆ ಪೂರ್ವಭಾವಿ ಸಭೆ

June 2, 2019
5:00 PM

ಪುತ್ತೂರು: ಗೇರು ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಅಖಿಲ ಭಾರತ ಗೇರು ಬೆಳೆಗಾರರ ಸಂಘವನ್ನು ಹುಟ್ಟುಹಾಕುವ ಬಗ್ಗೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ಪೂರ್ವಭಾವಿ ಸಭೆ  ನಡೆಯಿತು.

ಇತ್ತೀಚಿನ ವರ್ಷಗಳಲ್ಲಿ ಒಳ್ಳೆಯ ದರ ಹಾಗೂ ಬೆಳೆಯ ಹಲವಾರು ಉಪಯುಕ್ತ ಗುಣಗಳಿಂದಾಗಿ ಗೇರು ಕೃಷಿ ಜನಪ್ರಿಯವಾಗುತ್ತಿದೆ. ಆದರೆ ದಿಢೀರ್ ದರ ಕುಸಿತ, ಮಧ್ಯವರ್ತಿಗಳ ಹಾವಳಿ, ಕೃಷಿಕರಿಗೆ ಸರಕಾರದ ಮಟ್ಟದಲ್ಲಿ ಧ್ವನಿ ಇಲ್ಲದಿರುವುದು ಇತ್ಯಾದಿ ಹಲವಾರು ಸಮಸ್ಯೆಗಳೂ ಬೆಳೆಗಾರರನ್ನು ಕಾಡುತ್ತಿವೆ, ಹಾಗಾಗಿ ಇಂತಹ ಸಂದರ್ಭಗಳಲ್ಲಿ ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಅಖಿಲ ಭಾರತ ಗೇರು ಬೆಳೆಗಾರರ ಸಂಘವನ್ನು ಹುಟ್ಟುಹಾಕಲು ಯೋಜಿಸಲಾಗಿದೆ.

Advertisement

ಕ್ಯಾಂಪ್ಕೋ ಅಧ್ಯಕ್ಷ  ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉದ್ದೇಶಿತ ಗೇರು ಬೆಳೆಗಾರರ ಸಂಘದ ಧ್ಯೇಯೋದ್ದೇಶಗಳನ್ನು ವಿಸ್ತೃತವಾಗಿ ಚರ್ಚಿಸಲಾಯಿತು. ಗೇರು ಕೃಷಿಕರ ಮಾರುಕಟ್ಟೆಯ ಸಮಸ್ಯೆಗಳಿಗೆ ರಾಜ್ಯ ಮತ್ತು ಕೇಂದ್ರದ ಮಟ್ಟದಲ್ಲಿ ಸ್ಪಂದಿಸುವ ಸಮರ್ಥ ವೇದಿಕೆ,  ದೇಶದ ಗೇರು ಕೃಷಿಕರ ನಡುವಿನ ಸಂವಹನ, ಸಂಬಂಧಪಟ್ಟ ಇಲಾಖೆಗಳೊಡನೆ ಸಹಯೋಗ, ಗೇರು ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ಅರಿವು ಮೂಡಿಸುವುದು, ರೈತ ಉತ್ಪಾದಕ ಕಂಪನಿಗಳನ್ನು ಗೇರಿನಲ್ಲಿ ಹುಟ್ಟುಹಾಕಲು ಉತ್ತೇಜನ ಮುಂತಾದ ಚಟುವಟಿಕೆಗಳು ಸಂಘದಿಂದ ನಡೆಯಬೇಕು ಎಂದು ತೀರ್ಮಾನಿಸಲಾಯಿತು.

ಕ್ಯಾಂಪ್ಕೋದಿಂದ ಈ ಸಂಘಕ್ಕೆ ಎಲ್ಲ ಸಹಕಾರ ಸಿಗುವ ಭರವಸೆಯನ್ನು ಸತೀಶ್ಚಂದ್ರ ಅವರು ನೀಡಿದರು. ಜೊತೆಗೆ ಸಂಘಕ್ಕೆ ಶಾಸಕರು ಮತ್ತು ಸಂಸದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದು ತೀರ್ಮಾನಿಸಲಾಯಿತು. ಸಭೆಯಲ್ಲಿ ಕ್ಯಾಂಪ್ಕೋ ಈಗಿರುವ ಬೆಳೆಗಳ ಜೊತೆಗೆ ಗೇರು ಬೀಜ ಸಂಸ್ಕರಣೆಯನ್ನೂ ಕೈಗೆತ್ತಿಕೊಳ್ಳಬೇಕೆಂದು ಕೃಷಿಕರು ಅಭಿಪ್ರಾಯಪಟ್ಟರು.

Advertisement

ಗೇರು ಕೃಷಿಕರಾದ ಸುಭಾಷ್ ರೈ ಕಡಮಜಲು, ನನ್ಯ ಅಚ್ಯುತ ಮೂಡತ್ತಾಯ, ದೇವಿಪ್ರಸಾದ ಪುಣಚ, ನಟೇಶ್ ಮೂಡಾಯೂರು, ನಾರಾಯಣ ನಾಯಕ್, ಮನೋಹರ ಶೆಟ್ಟಿ, ದೇವಣ್ಣ ರೈ, ,ದೊಡ್ಡಬಳ್ಳಾಪುರ ನಾಗರಾಜ್ ಮತ್ತವರ ತಂಡದ ಕೃಷಿಕರು ಹಾಜರಿದ್ದರು.

ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಗಂಗಾಧರ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ವಿಜ್ಞಾನಿ ಡಾ. ಮೋಹನ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror