ಕೃಷಿ

ಅಖಿಲ ಭಾರತ ಗೇರು ಬೆಳೆಗಾರರ ಸಂಘ ಸ್ಥಾಪನೆಗೆ ಪೂರ್ವಭಾವಿ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಗೇರು ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಅಖಿಲ ಭಾರತ ಗೇರು ಬೆಳೆಗಾರರ ಸಂಘವನ್ನು ಹುಟ್ಟುಹಾಕುವ ಬಗ್ಗೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ಪೂರ್ವಭಾವಿ ಸಭೆ  ನಡೆಯಿತು.

Advertisement

ಇತ್ತೀಚಿನ ವರ್ಷಗಳಲ್ಲಿ ಒಳ್ಳೆಯ ದರ ಹಾಗೂ ಬೆಳೆಯ ಹಲವಾರು ಉಪಯುಕ್ತ ಗುಣಗಳಿಂದಾಗಿ ಗೇರು ಕೃಷಿ ಜನಪ್ರಿಯವಾಗುತ್ತಿದೆ. ಆದರೆ ದಿಢೀರ್ ದರ ಕುಸಿತ, ಮಧ್ಯವರ್ತಿಗಳ ಹಾವಳಿ, ಕೃಷಿಕರಿಗೆ ಸರಕಾರದ ಮಟ್ಟದಲ್ಲಿ ಧ್ವನಿ ಇಲ್ಲದಿರುವುದು ಇತ್ಯಾದಿ ಹಲವಾರು ಸಮಸ್ಯೆಗಳೂ ಬೆಳೆಗಾರರನ್ನು ಕಾಡುತ್ತಿವೆ, ಹಾಗಾಗಿ ಇಂತಹ ಸಂದರ್ಭಗಳಲ್ಲಿ ಬೆಳೆಗಾರರ ಹಿತಾಸಕ್ತಿಯನ್ನು ರಕ್ಷಿಸುವ ಸಲುವಾಗಿ ಅಖಿಲ ಭಾರತ ಗೇರು ಬೆಳೆಗಾರರ ಸಂಘವನ್ನು ಹುಟ್ಟುಹಾಕಲು ಯೋಜಿಸಲಾಗಿದೆ.

ಕ್ಯಾಂಪ್ಕೋ ಅಧ್ಯಕ್ಷ  ಸತೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉದ್ದೇಶಿತ ಗೇರು ಬೆಳೆಗಾರರ ಸಂಘದ ಧ್ಯೇಯೋದ್ದೇಶಗಳನ್ನು ವಿಸ್ತೃತವಾಗಿ ಚರ್ಚಿಸಲಾಯಿತು. ಗೇರು ಕೃಷಿಕರ ಮಾರುಕಟ್ಟೆಯ ಸಮಸ್ಯೆಗಳಿಗೆ ರಾಜ್ಯ ಮತ್ತು ಕೇಂದ್ರದ ಮಟ್ಟದಲ್ಲಿ ಸ್ಪಂದಿಸುವ ಸಮರ್ಥ ವೇದಿಕೆ,  ದೇಶದ ಗೇರು ಕೃಷಿಕರ ನಡುವಿನ ಸಂವಹನ, ಸಂಬಂಧಪಟ್ಟ ಇಲಾಖೆಗಳೊಡನೆ ಸಹಯೋಗ, ಗೇರು ಉತ್ಪಾದನಾ ತಾಂತ್ರಿಕತೆಗಳ ಬಗ್ಗೆ ಅರಿವು ಮೂಡಿಸುವುದು, ರೈತ ಉತ್ಪಾದಕ ಕಂಪನಿಗಳನ್ನು ಗೇರಿನಲ್ಲಿ ಹುಟ್ಟುಹಾಕಲು ಉತ್ತೇಜನ ಮುಂತಾದ ಚಟುವಟಿಕೆಗಳು ಸಂಘದಿಂದ ನಡೆಯಬೇಕು ಎಂದು ತೀರ್ಮಾನಿಸಲಾಯಿತು.

ಕ್ಯಾಂಪ್ಕೋದಿಂದ ಈ ಸಂಘಕ್ಕೆ ಎಲ್ಲ ಸಹಕಾರ ಸಿಗುವ ಭರವಸೆಯನ್ನು ಸತೀಶ್ಚಂದ್ರ ಅವರು ನೀಡಿದರು. ಜೊತೆಗೆ ಸಂಘಕ್ಕೆ ಶಾಸಕರು ಮತ್ತು ಸಂಸದರ ಸಹಾಯವನ್ನು ಪಡೆದುಕೊಳ್ಳಬೇಕು ಎಂದು ತೀರ್ಮಾನಿಸಲಾಯಿತು. ಸಭೆಯಲ್ಲಿ ಕ್ಯಾಂಪ್ಕೋ ಈಗಿರುವ ಬೆಳೆಗಳ ಜೊತೆಗೆ ಗೇರು ಬೀಜ ಸಂಸ್ಕರಣೆಯನ್ನೂ ಕೈಗೆತ್ತಿಕೊಳ್ಳಬೇಕೆಂದು ಕೃಷಿಕರು ಅಭಿಪ್ರಾಯಪಟ್ಟರು.

ಗೇರು ಕೃಷಿಕರಾದ ಸುಭಾಷ್ ರೈ ಕಡಮಜಲು, ನನ್ಯ ಅಚ್ಯುತ ಮೂಡತ್ತಾಯ, ದೇವಿಪ್ರಸಾದ ಪುಣಚ, ನಟೇಶ್ ಮೂಡಾಯೂರು, ನಾರಾಯಣ ನಾಯಕ್, ಮನೋಹರ ಶೆಟ್ಟಿ, ದೇವಣ್ಣ ರೈ, ,ದೊಡ್ಡಬಳ್ಳಾಪುರ ನಾಗರಾಜ್ ಮತ್ತವರ ತಂಡದ ಕೃಷಿಕರು ಹಾಜರಿದ್ದರು.

ಗೇರು ಸಂಶೋಧನಾ ನಿರ್ದೇಶನಾಲಯದ ನಿರ್ದೇಶಕ ಡಾ. ಗಂಗಾಧರ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಹಿರಿಯ ವಿಜ್ಞಾನಿ ಡಾ. ಮೋಹನ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

7 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

22 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

22 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

22 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

22 hours ago