Advertisement
MIRROR FOCUS

ಅಗಲಿದ ಡಿ.ಸಿ. ಮಾಸ್ಟರ್ ಗೊಂದು ನಮನಗಳು

Share

ಒಂದು ಶಾಲೆ ಅಭಿವೃದ್ಧಿಯಾಗಬೇಕಾದರೆ ಹಲವರ ಪರಿಶ್ರಮವಿರುತ್ತದೆ. ಅಲ್ಲಿ ಸಂಸ್ಥಾಪಕರ ಪಾತ್ರಕ್ಕೆ ಸರಿ ಸಾಟಿಯಾಗಿ ಕೈ ಜೋಡಿಸಲು ಅಧ್ಯಾಪಕರು, ಕಮಿಟಿಯವರು, ಊರವರು , ವಿದ್ಯಾರ್ಥಿಗಳು ಸಮರ್ಥರಾದಾಗ ಯಶಸ್ಸಿನ ಉತ್ತುಂಗವೇರುವುದರಲ್ಲಿ ಸಂಶಯವೇ ಇಲ್ಲ. ಪ್ರತಿಯೊಬ್ಬರ ನಿಸ್ವಾರ್ಥ ದುಡಿಮೆಯ ಅಗತ್ಯ ವಿದ್ಯಾಸಂಸ್ಥೆ ಬಯಸುತ್ತದೆ.

ಈ ವಿಷಯಗಳಲ್ಲಿ ನಮ್ಮ ವಿದ್ಯಾಭೋಧಿನಿ ಶಿಕ್ಷಣ ಸಂಸ್ಥೆಗಳು ಯಶಸ್ವಿ ಮೈಲುಗಲ್ಲನ್ನೇ ಸ್ಥಾಪಿಸಿತ್ತು. ದಿಟ್ಟ ಮುಖ್ಯೋಪಾಧ್ಯಾಯರಾಗಿದ್ದ ಬಿ.ವಿ ಶಗ್ರಿತ್ತಾಯರು ಹಾಗೂ ಅವರ ಹೆಗಲಿಗೆ ಹೆಗಲು ಕೊಟ್ಟು ದುಡಿದ ಅಧ್ಯಾಪಕರ ತಂಡವೇ ವಿದ್ಯಾಭೋಧಿನಿ ಪ್ರೌಢಶಾಲೆಯ ಪ್ರಮುಖ ಆಸ್ತಿ. ಅವರ ಪರಿಶ್ರಮಕ್ಕೆ ಬೆಂಗಾವಲಾಗಿದ್ದ ಎಜುಕೇಶನ್ ಸೊಸೈಟಿ. ಬಾಳಿಲ ಶಿಕ್ಷಣ ಸಂಸ್ಥೆಗಳೊಂದಿಗೆ ಪ್ರಮುಖವಾಗಿ ಕೇಳಿ ಬರುವ ಹೆಸರು ದಿನೇಶ್ಚಂದ್ರ ಕಿಲಂಗೋಡಿ. ಶಿಕ್ಷಕರಾಗಿ ತಮ್ಮ ವಿಶಿಷ್ಟ ಮ್ಯಾನರಿಸಂನಿಂದಾಗಿ ವಿದ್ಯಾರ್ಥಿಗಳೊಂದಿಗೆ ಮಾತ್ರವಲ್ಲದೆ ಮಕ್ಕಳ ಪೋಷಕರೊಂದಿಗೂ ಹೆಸರುವಾಸಿಯಾಗಿದ್ದವರು. ‌ ತಮ್ಮ ಅಪೂರ್ವ ಜ್ನಾಪಕ ಶಕ್ತಿಯಿಂದಲೂ ಹೆಸರುವಾಸಿಯಾಗಿದ್ದವರು. ದೂರವಾಣಿ( ಆ ದಿನಗಳಲ್ಲಿ ಮೊಬೈಲ್ ಇರಲಿಲ್ಲ) ಒಮ್ಮೆ ಕೇಳಿಸಿಕೊಂಡ ದೂರವಾಣಿ ಸಂಖ್ಯೆಗಳು ಅವರಿಗೆ ಬಾಯಿಪಾಠ. ಎಷ್ಟು ವರುಷಗಳು ಕಳೆದರು ಮುಖ ನೋಡಿದ ಕೂಡಲೇ ದೂರವಾಣಿ ಸಂಖ್ಯೆ ಹೇಳಿ ಬಿಡುತ್ತಿದ್ದರು. ಯಾವುದೇ ನಂಬರ್ ಬೇಕಿದ್ದರೆ ಆ ಮಾಸ್ಟರ್ ಹತ್ತಿರ ವಿಚಾರಿಸಿದಿರಾ ಎಂಬಷ್ಟರ ಮಟ್ಟಿಗೆ.
ಅವರು ಯಾವ ವಿದ್ಯಾರ್ಥಿಗಳನ್ನೂ ಕಡೆಗಣಿಸಿದ ಉದಾಹರಣೆಗಳಿಲ್ಲ. ಎಲ್ಲರನ್ನು ಸಮಾನವಾಗಿ ಗುರುತಿಸುತ್ತಿದ್ದವರು. ಎಲ್ಲಿ ಅವರ ಅಗತ್ಯವಿದೆಯೋ ಅಲ್ಲಿ ಸಕ್ರೀಯರಾಗಿರುತ್ತಿದ್ದರು. ಹಿರಿಯ ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಶಾಲೆ ಹಾಗೂ ವಿದ್ಯಾರ್ಥಿಗಳ ನಡುವೆ ಕೊಂಡಿಯಾಗಿದ್ದವರು. ವಿಜ್ಞಾನ, ಗಣಿತ ಶಿಕ್ಷಕರಾಗಿ ಮಕ್ಕಳ ನೆಚ್ಚಿನವರಾಗಿದ್ದರು. ಅದರಲ್ಲೂ ಶೈಕ್ಷಣಿಕ ಪ್ರವಾಸಗಳ ಸಂಘಟನೆಯಲ್ಲಿ ಗುರುತರವಾದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರು. ಸೀಮಿತ ಖರ್ಚುವೆಚ್ಚದಲ್ಲಿ ಪ್ರವಾಸಗಳನ್ನು ಆಯೋಜಿಸುತ್ತಿದ್ದರು. ದೂರ ದೂರದ ಪ್ರವಾಸಗಳು ಕೈಗೆಟುಕುವ ದರದಲ್ಲಿ ಹಳ್ಳಿ ಮಕ್ಕಳಿಗೆ ಲಭ್ಯವಾಗುತ್ತಿದ್ದುದರ ಹಿಂದೆ ಆ ಮಾಸ್ಟರ್ ರ ಪರಿಶ್ರಮವಿದೆ.

ಕೆಲವು ವರುಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ ಅದೇ ಉತ್ಸಾಹದಿಂದ ಸಕ್ರೀಯರಾಗಿ ಶಾಲಾಕೆಲಸಗಳಲ್ಲಿ ತೊಡಗಿರುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಬಂದ ಸುದ್ದಿ ಆ ಮಾಸ್ಟರ್ ಇನ್ನಿಲ್ಲ. ನಂಬಲು ಕಷ್ಟವಾಯಿತು. ಅವರ ಆತ್ಮಕ್ಕೆ ‌ಚಿರಶಾಂತಿಯನ್ನು ಭಗವಂತ ಕರುಣಿಸಲಿ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

6 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago