Advertisement
MIRROR FOCUS

ಅಗಲಿದ ಡಿ.ಸಿ. ಮಾಸ್ಟರ್ ಗೊಂದು ನಮನಗಳು

Share

ಒಂದು ಶಾಲೆ ಅಭಿವೃದ್ಧಿಯಾಗಬೇಕಾದರೆ ಹಲವರ ಪರಿಶ್ರಮವಿರುತ್ತದೆ. ಅಲ್ಲಿ ಸಂಸ್ಥಾಪಕರ ಪಾತ್ರಕ್ಕೆ ಸರಿ ಸಾಟಿಯಾಗಿ ಕೈ ಜೋಡಿಸಲು ಅಧ್ಯಾಪಕರು, ಕಮಿಟಿಯವರು, ಊರವರು , ವಿದ್ಯಾರ್ಥಿಗಳು ಸಮರ್ಥರಾದಾಗ ಯಶಸ್ಸಿನ ಉತ್ತುಂಗವೇರುವುದರಲ್ಲಿ ಸಂಶಯವೇ ಇಲ್ಲ. ಪ್ರತಿಯೊಬ್ಬರ ನಿಸ್ವಾರ್ಥ ದುಡಿಮೆಯ ಅಗತ್ಯ ವಿದ್ಯಾಸಂಸ್ಥೆ ಬಯಸುತ್ತದೆ.

ಈ ವಿಷಯಗಳಲ್ಲಿ ನಮ್ಮ ವಿದ್ಯಾಭೋಧಿನಿ ಶಿಕ್ಷಣ ಸಂಸ್ಥೆಗಳು ಯಶಸ್ವಿ ಮೈಲುಗಲ್ಲನ್ನೇ ಸ್ಥಾಪಿಸಿತ್ತು. ದಿಟ್ಟ ಮುಖ್ಯೋಪಾಧ್ಯಾಯರಾಗಿದ್ದ ಬಿ.ವಿ ಶಗ್ರಿತ್ತಾಯರು ಹಾಗೂ ಅವರ ಹೆಗಲಿಗೆ ಹೆಗಲು ಕೊಟ್ಟು ದುಡಿದ ಅಧ್ಯಾಪಕರ ತಂಡವೇ ವಿದ್ಯಾಭೋಧಿನಿ ಪ್ರೌಢಶಾಲೆಯ ಪ್ರಮುಖ ಆಸ್ತಿ. ಅವರ ಪರಿಶ್ರಮಕ್ಕೆ ಬೆಂಗಾವಲಾಗಿದ್ದ ಎಜುಕೇಶನ್ ಸೊಸೈಟಿ. ಬಾಳಿಲ ಶಿಕ್ಷಣ ಸಂಸ್ಥೆಗಳೊಂದಿಗೆ ಪ್ರಮುಖವಾಗಿ ಕೇಳಿ ಬರುವ ಹೆಸರು ದಿನೇಶ್ಚಂದ್ರ ಕಿಲಂಗೋಡಿ. ಶಿಕ್ಷಕರಾಗಿ ತಮ್ಮ ವಿಶಿಷ್ಟ ಮ್ಯಾನರಿಸಂನಿಂದಾಗಿ ವಿದ್ಯಾರ್ಥಿಗಳೊಂದಿಗೆ ಮಾತ್ರವಲ್ಲದೆ ಮಕ್ಕಳ ಪೋಷಕರೊಂದಿಗೂ ಹೆಸರುವಾಸಿಯಾಗಿದ್ದವರು. ‌ ತಮ್ಮ ಅಪೂರ್ವ ಜ್ನಾಪಕ ಶಕ್ತಿಯಿಂದಲೂ ಹೆಸರುವಾಸಿಯಾಗಿದ್ದವರು. ದೂರವಾಣಿ( ಆ ದಿನಗಳಲ್ಲಿ ಮೊಬೈಲ್ ಇರಲಿಲ್ಲ) ಒಮ್ಮೆ ಕೇಳಿಸಿಕೊಂಡ ದೂರವಾಣಿ ಸಂಖ್ಯೆಗಳು ಅವರಿಗೆ ಬಾಯಿಪಾಠ. ಎಷ್ಟು ವರುಷಗಳು ಕಳೆದರು ಮುಖ ನೋಡಿದ ಕೂಡಲೇ ದೂರವಾಣಿ ಸಂಖ್ಯೆ ಹೇಳಿ ಬಿಡುತ್ತಿದ್ದರು. ಯಾವುದೇ ನಂಬರ್ ಬೇಕಿದ್ದರೆ ಆ ಮಾಸ್ಟರ್ ಹತ್ತಿರ ವಿಚಾರಿಸಿದಿರಾ ಎಂಬಷ್ಟರ ಮಟ್ಟಿಗೆ.
ಅವರು ಯಾವ ವಿದ್ಯಾರ್ಥಿಗಳನ್ನೂ ಕಡೆಗಣಿಸಿದ ಉದಾಹರಣೆಗಳಿಲ್ಲ. ಎಲ್ಲರನ್ನು ಸಮಾನವಾಗಿ ಗುರುತಿಸುತ್ತಿದ್ದವರು. ಎಲ್ಲಿ ಅವರ ಅಗತ್ಯವಿದೆಯೋ ಅಲ್ಲಿ ಸಕ್ರೀಯರಾಗಿರುತ್ತಿದ್ದರು. ಹಿರಿಯ ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಶಾಲೆ ಹಾಗೂ ವಿದ್ಯಾರ್ಥಿಗಳ ನಡುವೆ ಕೊಂಡಿಯಾಗಿದ್ದವರು. ವಿಜ್ಞಾನ, ಗಣಿತ ಶಿಕ್ಷಕರಾಗಿ ಮಕ್ಕಳ ನೆಚ್ಚಿನವರಾಗಿದ್ದರು. ಅದರಲ್ಲೂ ಶೈಕ್ಷಣಿಕ ಪ್ರವಾಸಗಳ ಸಂಘಟನೆಯಲ್ಲಿ ಗುರುತರವಾದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರು. ಸೀಮಿತ ಖರ್ಚುವೆಚ್ಚದಲ್ಲಿ ಪ್ರವಾಸಗಳನ್ನು ಆಯೋಜಿಸುತ್ತಿದ್ದರು. ದೂರ ದೂರದ ಪ್ರವಾಸಗಳು ಕೈಗೆಟುಕುವ ದರದಲ್ಲಿ ಹಳ್ಳಿ ಮಕ್ಕಳಿಗೆ ಲಭ್ಯವಾಗುತ್ತಿದ್ದುದರ ಹಿಂದೆ ಆ ಮಾಸ್ಟರ್ ರ ಪರಿಶ್ರಮವಿದೆ.

ಕೆಲವು ವರುಷಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೂ ಅದೇ ಉತ್ಸಾಹದಿಂದ ಸಕ್ರೀಯರಾಗಿ ಶಾಲಾಕೆಲಸಗಳಲ್ಲಿ ತೊಡಗಿರುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಬಂದ ಸುದ್ದಿ ಆ ಮಾಸ್ಟರ್ ಇನ್ನಿಲ್ಲ. ನಂಬಲು ಕಷ್ಟವಾಯಿತು. ಅವರ ಆತ್ಮಕ್ಕೆ ‌ಚಿರಶಾಂತಿಯನ್ನು ಭಗವಂತ ಕರುಣಿಸಲಿ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

2 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

6 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

16 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

16 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

17 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

19 hours ago