ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

January 9, 2020
11:15 AM

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್‌ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.

Advertisement

ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು‌ ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರುಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ
ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |
October 10, 2024
7:49 AM
by: ದ ರೂರಲ್ ಮಿರರ್.ಕಾಂ
ಕಣ್ಮರೆಯಾದ ಅಚ್ಚ ಕನ್ನಡದ ಮಾತಿನ ಮಲ್ಲಿ ಅಪರ್ಣಾ | ಕ್ಯಾನ್ಸರ್‌ಗೆ ಬಲಿಯಾದ ಅಪರ್ಣಾ |
July 12, 2024
9:24 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group