ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.
ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…