ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.
ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…