ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.
ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…