Advertisement
ನಿಧನ‌ ಸುದ್ದಿಗಳು

ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

Share

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್‌ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.

Advertisement

ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು‌ ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರುಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

10 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

10 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

11 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

11 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago