Advertisement
ನಿಧನ‌ ಸುದ್ದಿಗಳು

ಅಗಲಿದ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರ ಶ್ರದ್ಧಾಂಜಲಿ

Share

ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್‌ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್‌ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.

ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ‌ ಹೊಂದಿದ್ದಾರೆ. ಉಡುಪಿಯ‌ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆ‌ನೋವು‌ ಕಾಣಿಸಿಕೊಂಡ‌ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು‌ ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈ‌ಟಿವಿ ವರದಿಗಾರನಾಗಿ ಹಲವು ವರುಷಗಳ‌ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ‌ ಕೆಲಸ ಮಾಡಿ ಬಳಿಕ‌ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧು‌ಮಿತ್ರರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

21 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

21 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago