ಸುಳ್ಯ: ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ರವಿರಾಜ್ ವಳಲಂಬೆಯವರಿಗೆ ಸುಳ್ಯದ ಪತ್ರಕರ್ತರು ಪ್ರೆಸ್ ಕ್ಲಬ್ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಪತ್ರಕರ್ತರಾದ ಹರೀಶ್ ಬಂಟ್ವಾಳ್, ಗಂಗಾಧರ ಕಲ್ಲಪಳ್ಳಿ, ದುರ್ಗಾಕುಮಾರ್ ನಾಯರ್ಕೆರೆ, ಕಿರಣ್ ಪ್ರಸಾದ್ ಕುಂಡಡ್ಕ, ಶರೀಫ್ ಜಟ್ಟಿಪಳ್ಳ, ಲೇಖಕ ಎಂ.ಬಿ. ಸದಾಶಿವ ನುಡಿನಮನ ಸಲ್ಲಿಸಿದರು.
ಪತ್ರಕರ್ತರಾದ ಗಂಗಾಧರ ಮಟ್ಟಿ, ಗಿರೀಶ್ ಅಡ್ಪಂಗಾಯ, ವಿಶ್ವನಾಥ ಮೋಟುಕಾನ, ಲೋಕೇಶ್ ಗುಡ್ಡೆಮನೆ, ಪದ್ಮನಾಭ ಮುಂಡೋಕಜೆ, ಶ್ರೀಧರ್ ಕಜೆಗದ್ದೆ, ಯಶ್ವಿತ್ ಕಾಳಂಮನೆ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ , ಸಿ.ಐ.ಟಿ.ಯು. ಅಧ್ಯಕ್ಷ ಕೆ.ಪಿ. ಜಾನಿ, ನಂದರಾಜ್ ಸಂಕೇಶ, ಶಾಫಿ ಕುತ್ತಮೊಟ್ಟೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಭಾವಂತ ಪತ್ರಕರ್ತ: ಪ್ರತಿಭಾವಂತ ಪತ್ರಕರ್ತರಾಗಿದ್ದ ರವಿರಾಜ್ ವಳಲಂಬೆ ಹೃದಯಘಾತದಿಂದ ಮಂಗಳವಾರ ರಾತ್ರಿ ನಿಧನ ಹೊಂದಿದ್ದಾರೆ. ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ನಿವಾಸದಲ್ಲಿ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿಯೇ ಅಸುನೀಗಿದ್ದಾರೆ.
ಉಡುಪಿಯಲ್ಲಿ ಈಟಿವಿ ವರದಿಗಾರನಾಗಿ ಹಲವು ವರುಷಗಳ ಕಾಲ ಸೇವೆ ಸಲ್ಲಿಸಿದ ರವಿರಾಜ್ ನಂತರ ಸುವರ್ಣ ವಾಹಿನಿಯಲ್ಲಿ ರಾಜಕೀಯ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಉಡುಪಿಯಲ್ಲಿ ಪ್ರೈಮ್ ಟಿವಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಇಬ್ಬರು ಪುತ್ರಿಯರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…