Advertisement
Exclusive - Mirror Hunt

ಅಗ್ರಿ ಟಿಂಕರಿಂಗ್ ಫೆಸ್ಟ್ : 30 ಮಾದರಿ ಲಘು ಉದ್ಯೋಗ ಭಾರತಿ ವತಿಯಿಂದ ಅಭಿವೃದ್ಧಿ

Share

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ತೆಂಕಿಲದ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ  ನಡೆಸಿದ ಅನ್ವೇಷಣಾ 2019 ಕಾರ್ಯಕ್ರಮ ಯಶಸ್ಸುಕಂಡಿದೆ. ಅಗ್ರಿಟಿಂಕರಿಂಗ್ ಫೆಸ್ಟ್ ಹೆಸರಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಅತ್ಯುತ್ತಮ 38 ಮಾದರಿಗಳಿಗೆ ಬಹುಮಾನಗಳನ್ನೂ ನೀಡಲಾಗಿದೆ. ಇದರೊಂದಿಗೆ ಸುಮಾರು 30 ಮಾದರಿಗಳು ಅಭಿವೃದ್ಧಿಪಡಿಸುವುದಕ್ಕಾಗಿ ಆಯ್ಕೆಯಾಗಿದೆ. ಒಟ್ಟು 308 ಮಾದರಿಗಳು ಪ್ರದರ್ಶನಗೊಂಡಿದ್ದವು.

ರಾಜ್ಯದಲ್ಲೇ ಮೊದಲ ಬಾರಿಗೆ ಕೃಷಿ ಪರಿಕರಗಳ ನೂತನ ಅನ್ವೇಷಣೆಗಳಿಗಾಗಿ ಮತ್ತು ಕೃಷಿ ಸಂಶೋಧನೆಗಳಿಗೆ ಪ್ರೇರಣೆಕೊಡುವ ನಿಟ್ಟಿನಲ್ಲಿ ಅನ್ವೇಷಣಾ 2019  ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಆಯೋಜನೆ ಮಾಡಿತ್ತು. ಕ್ಯಾಂಪ್ಕೋ, ಕೆ.ಎಂ.ಎಫ್, ಲಘು ಉದ್ಯೋಗ ಭಾರತಿ, ಪಶುಸಂಗೋಪನಾ ಇಲಾಖೆಗಳು ಈ ಕಾರ್ಯಕ್ರಮಕ್ಕೆ ಸಹಯೋಗ ಒದಗಿಸಿದ್ದವು.

ಅನ್ವೇಷಣಾ ಕಾರ್ಯಕ್ರಮದ ಹೈಲೈಟ್ಸ್ ಇದು :

  • ಸಚಿವಕೋಟ ಶ್ರೀನಿವಾಸ ಪೂಜಾರಿ ಅನ್ವೇಷಣಾಕಾರ್ಯಕ್ರಮದ ಸಂಪೂರ್ಣ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಕೋರಿದ್ದು, ಕಾರ್ಯಕ್ರಮದ ವಿವರ, ಯಶಸ್ಸನ್ನು ವಿಧಾನಸಭೆಯಲ್ಲಿ ಮಂಡಿಸಿ, ಮುಂದಿನ ದಿನಗಳಲ್ಲಿ ಸರ್ಕಾರದಿಂದಅನ್ವೇಷಣಾದಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಭರವಸೆ ನೀಡಿದ್ದಾರೆ.
  • ಕಾರ್ಯಕ್ರಮದಲ್ಲಿ ಭಾಗಿಯಾದಒಟ್ಟು ಮುನ್ನೂರಎಂಟು ಮಾದರಿಗಳಲ್ಲಿ ಮೂವತ್ತು ಮಾದರಿಗಳನ್ನು ಲಘು ಉದ್ಯೋಗ ಭಾರತಿ ವತಿಯಿಂದಅಭಿವೃದ್ಧಿಪಡಿಸುವುದಕ್ಕಾಗಿಆಯ್ಕೆ ಮಾಡಲಾಗಿದೆ. ಮುಂದಿನ ಒಂದು ವರ್ಷದಅವಧಿಯಲ್ಲಿಆಯ್ಕೆ ಮಾಡಿದ ಮೂವತ್ತು ಮಾದರಿಗಳನ್ನು ಲಘುಉದ್ಯೋಗ ಭಾರತಿ ಮಾರುಕಟ್ಟೆಗೆತರಲಿದೆ. ಇದರಿಂದ ಕೃಷಿ ಕ್ಷೇತ್ರಕ್ಕೆ ನೂತನ ಆವಿಷ್ಕಾರಗಳು ದೊರೆಯಲಿದ್ದು, ಬಹುದೊಡ್ಡಕೊಡುಗೆ ಎನಿಸಲಿದೆ.
  • ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಕೃಷಿ ಅನ್ವೇಷಣೆಗಳ ಕುರಿತಾದ ಆಸಕ್ತಿ, ಪ್ರೀತಿಯನ್ನು ಮನಗಂಡು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ನೂತನ ಸಂಶೋಧನೆಗಳು, ಅವುಗಳ ಪೇಟೆಂಟ್ ವಿವರ, ಸ್ಟಾರ್ಟಪ್ ಯೋಜನೆಗಳನ್ನು ಆರಂಭಿಸುವಕುರಿತಾದ ವಿವರ ಇತ್ಯಾದಿಗಳನ್ನು ಸಂಶೋಧಕರಿಗೆ ಒದಗಿಸಿಕೊಡುವ ಹಿನ್ನೆಲೆಯಲ್ಲಿಒಂದು ಮಾಹಿತಿಕೇಂದ್ರತೆರೆಯುವಕುರಿತುಚಿಂತನೆ ನಡೆಸಲಾಗಿದೆ.
  • ಅನೇಕ ಮಂದಿ ವಿದ್ಯಾರ್ಥಿಗಳು ತಮಗೆದೊರೆತ ಬೆಂಬಲ, ಪ್ರೋತ್ಸಾಹ ಭರಿತ ಮಾತುಗಳಿಂದ ಪ್ರೇರಿತರಾಗಿ ಮುಂದೆ ನಿರಂತರವಾಗಿ ಕೃಷಿ ತಂತ್ರಜ್ಞಾನದ ಬಗೆಗೆ ಸಂಶೋಧನೆ ನಡೆಸುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿದ್ಯಾರ್ಥಿಗಳು ಕೃಷಿ ಕುಟುಂಬದವರೇಆಗಿರುವುದರಿಂದತಮ್ಮ ಹೆತ್ತವರುಕೃಷಿಯಲ್ಲಿಎದುರಿಸುವ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವುದರ ಮೂಲಕ ಸಮಾಜಕ್ಕೆ ಬಹುದೊಡ್ಡಕೊಡುಗೆ ನೀಡಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

5 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

12 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

23 hours ago